Author: admin

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘದಿಂದ ಜನರಲ್ಲಿ ಸ್ವಾಭಿಮಾನದ ಬದುಕಿನ ಜೊತೆಗೆ ಆರ್ಥಿಕ ಶಕ್ತಿ ಹಾಗೂ ಧೈರ್ಯ ಬಂದಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದ.ಕ. ಜಿಲ್ಲಾ ನಿರ್ಧೇಶಕ ದಿನೇಶ್ ಡಿ. ಹೇಳಿದರು. ಕುರಿಯಾಳ ಶಾಲೆಯಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ಬಿ.ಸಿ.ರೋಡು ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘದ ಕುರಿಯಾಳ ಒಕ್ಕೂಟದ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಿ ಮಾತನಾಡಿದರು. ಶುಭ ಸಮೂಹ ಸಂಸ್ಥೆಯ ಚಂದ್ರಾವತಿ ಸೇಸಪ್ಪ ಕೋಟ್ಯಾನ್ ದೀಪ ಪ್ರಜ್ವಲಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿಸೋಜಾ ಮಾತನಾಡಿ ಜನರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಯೋಜನವನ್ನು ಪಡೆದು ಇನ್ನಿತರರಿಗೆ ಪ್ರೇರಣೆ ನೀಡುವ ಕಾರ್ಯ ಆಗಬೇಕು ಎಂದು ತಿಳಿಸಿದರು. ನೂತನ ಅಧ್ಯಕ್ಷ ನವಿನ್ ಪೂಜಾರಿ ಅನಿಸಿಕೆ ವ್ಯಕ್ತಪಡಿಸಿ ಎಲ್ಲರ ಸಹಕಾರ ಕೋರಿದರು. ಅಮ್ಟಾಡಿ ಕೃಷಿ ಪತ್ತಿನ…

Read More

ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಶೋಸಿಯೇಷನ್ ಬಂಟ್ವಾಳ ವತಿಯಿಂದ ಮೂಡೂರು- ಪಡೂರು ಕಂಬಳದ ಬಂಟ್ವಾಳ ಕಂಬಳ ಶೀರ್ಷಿಕೆ ಯಲ್ಲಿ ಜಿಲ್ಲಾ ಮಟ್ಟದ ಫೋಟೋ ಸ್ಪರ್ಧೆ ಯನ್ನು ಆಯೋಜಿಸಲಾಗಿದ್ದು ಇದರ ವಿಜೇತರಾಗಿ ನವೀನ್ ದೇವಾಡಿಗ ಬಂಟ್ವಾಳ ಪ್ರಥಮ, ಸ್ಟೀವನ್ ಪಾಯಸ್ ಮಂಗಳೂರು ದ್ವಿತೀಯ, ಚಂದ್ರ ಕಲ್ಮಲೆ ತೃ ತೀಯ ಬಹುಮಾನ ಗಳಿಸಿದ್ದಾರೆ. ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಉಡುಪಿ ತೀರ್ಪುಗಾರರಾಗಿದ್ದರು.

Read More

ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ಯುವಕರ ಸಂಘ ಹಾಗೂ ಮಹಿಳಾ ಸಂಘ ದೇವಂದಬೆಟ್ಟು,ಇದರ 42ನೇ ವರ್ಷದ ವಾರ್ಷಿಕೋತ್ಸವವು ಎ.18ರಂದು ಶನಿವಾರ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆಯು ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಸನ್ನಿದಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರದಾನ ಅರ್ಚಕರಾದ ಕೆ ಶಿವರಾಮ ಶಿವರಾಯ, ಯುವಕರ ಸಂಘದ ಅಧ್ಯಕ್ಷರಾದ ಶಶಿಧರ್ ಕನಪಾಡಿ,ಕೋಶಾಧಿಕಾರಿ ಪ್ರಶಾಂತ್ ಕನಪಾಡಿ, ಪ್ರಮುಖರಾದ ಮನೋಜ್ ಕನಪಾಡಿ, ಜಗದೀಶ್ ಬಂಗೇರ ಕಂಜತ್ತೂರು,ಚೇತನ್ ದೇವಂದಬೆಟ್ಟು, ಉದಯ ದೇವಂದಬೆಟ್ಟು, ಚಂದ್ರಹಾಸ ಕರ್ಕೇರ ದೇವಂದಬೆಟ್ಟು ಮತ್ತಿತರರು ಉಪಸ್ಥಿತರಿದ್ದರು

Read More

ಬಂಟ್ವಾಳ: ಗ್ರಾಮೀಣ ಭಾಗದ ರೈತರಿಗೆ ವರದಾನವಾಗಿರುವ ಸಜೀಪ ಮುನ್ನೂರು ಹಾಗೂ ಸಜೀಪ ಮೂಡ ಏತ ನೀರಾವರಿ ಯೋಜನೆಗಳ ಪೈಪ್ ಲೈನ್ ವಿಸ್ತರಣೆಗೆ ತಲಾ ರೂ. 23 ಲಕ್ಷ ಅನುದಾನ ಮಂಜೂರಾಗಿದೆ. ಈ ಎರಡು ಏತ ನೀರಾವರಿ ಯೋಜನೆಗಳು 90 ಹೆಚ್ ಪಿ ಪಂಪ್ ಸೆಟ್ ಗಳ ಮೂಲಕ ರೈತರಿಗೆ ನೆತ್ರಾವತಿ ನದಿಯಿಂದ ನೀರಾವರಿ ಸೌಲಭ್ಯ ಒದಗಿಸುತ್ತಿದ್ದು ಇದೀಗ ಸ್ಥಳೀಯ ರೈತರ ಬೇಡಿಕೆಯಂತೆ ಹೆಚ್ಚುವರಿ ಜಮೀನುಗಳಿಗೆ 200 ಎಂ.ಎಂ ಪೈಪ್ ಲೈನ್ ಮೂಲಕ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯ ವಿಸ್ತರಣೆಯಾಗಲಿದೆ. ಇತ್ತೀಚೆಗೆ ಏತನೀರಾವರಿ ಯೋಜನೆಯ ಫಲಾನುಭವಿಗಳು ಮಾಜಿ ಸಚಿವ ರಮಾನಾಥ ರೈ ಯವರ ನೇತೃತ್ವದಲ್ಲಿ ಸಜೀಪಮುನ್ನೂರು ಗ್ರಾಮದ ಮಡಿವಾಳ ಪಡ್ಪು ಕೂಸನಕಟ್ಟೆ ಯ ಪಂಪ್ ಹೌಸ್ ಬಳಿ ಸಭೆ ನಡೆಸಿ ಏತ ನೀರಾವರಿಯ ಸೌಲಭ್ಯವನ್ನು ವಿಸ್ತರಿಸುವಂತೆ ಬೇಡಿಕೆಯನ್ನು ಮುಂದಿಟ್ಟಿದ್ದರು. ತಕ್ಷಣ ಸ್ಪಂದಿಸಿದ ಮಾಜಿ ಸಚಿವ ಬಿ.ರಮಾನಾಥ ರೈ ರೈತರ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು ತ್ವರಿತವಾಗಿ ಅನುದಾನ ಒದಗಿಸುವಲ್ಲಿ ಸಹಕರಿಸಿದ್ದಾರೆ. ರೈತರ ಬೇಡಿಕೆಗೆ…

Read More

ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯವು ಕಾರ್ಕಳ ದಲ್ಲಿ ನಡೆದ ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ವನ್ನು ಗೆದ್ದುಕೊಂಡಿದೆ. ಈ ಕ್ರೀಡಾಕೂಟ ದಲ್ಲಿ 14 ವಲಯದ ತಂಡಗಳು ಭಾಗವಹಿಸಿದ್ದು ಬಂಟ್ವಾಳ ವಲಯ ಚಾಂಪಿಯನ್ ಆಗಿದೆ

Read More

ಗ್ಯಾಸ್‌ ವಿತರಣೆಯಲ್ಲಿ ಸಮಸ್ಯೆಗಳು ಇರುವ ಕುರಿತು ಸುದ್ದಿಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಭದ್ರಾ ಏಜನ್ಸಿಸ್ ನ ಭಾರತ್ ಗ್ಯಾಸ್ ವಿತರಕರಾದ ಮಂಜುನಾಥ ಆಚಾರ್ಯ ಸ್ಪಷ್ಟನೆಯನ್ನು ನೀಡಿದ್ದಾರೆ ವದಂತಿಗಳಿಗೆ ಗ್ರಾಹಕರು ತಲೆಕೆಡಿಸಿಕೊಳ್ಳುವುದು, ಭೀತಿಪಡುವುದು ಅಗತ್ಯವಿಲ್ಲ. ಎಂದಿನಂತೆ ಸಮಯಕ್ಕೆ ತಲುಪಿಸಲಾಗುತ್ತದೆ ಮನೆಗಳು, ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಪೂರೈಕೆ ಸಾಮಾನ್ಯವಾಗಿದೆ. ನಿಮಗೆ ಅಗತ್ಯವಿರುವಾಗ ಮಾತ್ರ ಬುಕ್ ಮಾಡಿ, ಮತ್ತು ಗ್ಯಾಸ್ ಸಿಲಿಂಡರ್ ನಿಮಗೆ ಸಮಯಕ್ಕೆ ತಲುಪುತ್ತದೆ ಎಂದು ಅವರು ತಿಳಿಸಿದ್ದಾರೆ.

Read More

ಮಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳೂರಿನ ಮೇರಿಹಿಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರರ ಬಾಲಕಿಯರ ನಿಲಯದ ರಜತ ಸಂಭ್ರಮದ ಹಾಸ್ಟೇಲ್ ಡೇ ಅಗಮ್ಯ-2026 ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ವಿಶ್ವದಾಖಲೆ ಬರೆದ ಮಂಗಳೂರಿನ ಪ್ರತಿಭಾವಂತ ಭರತನಾಟ್ಯ ಪಟು ರೆಮೋನಾ ಎವೆಟ್ ಪಿರೇರಾ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ನಮ್ಮ ಕನಸನ್ನು, ನಾವು ಮಾಡುವ ಕಾರ್ಯವನ್ನು ಪ್ರೀತಿಸಬೇಕು ಎಂದರು ನೀವು ಪ್ರತಿಯೊಬ್ಬರು ಪ್ರತಿಭಾನ್ವಿತರು. ಅಸಾಧ್ಯ ಎನ್ನುವುದು ಯಾವುದೂ ಇಲ್ಲ.‌ ನಿರಂತರ ಪ್ರಯತ್ನ ಹಾಗೂ ಬದ್ಧತೆಯಿಂದ ಕೆಲಸ ಮಾಡಿದಾಗ ಸಾಧನೆ ಮಾಡಲು ಸಾಧ್ಯ ಆದ್ದರಿಂದ ಎಂದಿಗೂ ನಿಮ್ಮ ಪ್ರಯತ್ನವನ್ನು ಬಿಡಬೇಡಿ ಎಂದು ನಿಲಯದ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ನಂದಿಕೂರು ಎಜುಕೇಷನ್ ಟ್ರಸ್ಟ್ ನ ಆಡಳಿತಾಧಿಕಾರಿ ಸಾಯಿನಾಥ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಜೀತ ವಿಮುಕ್ತಿಗಾಗಿ ಶ್ರಮಿಸಿದವರು,…

Read More

ಬಂಟ್ವಾಳ : ಜಿಲ್ಲೆಯ ಕಾರಣಿಕ ದೈವಸ್ಥಾನ ತಾಲೂಕಿನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮಾರ್ಚ್ ತಿಂಗಳಿನಲ್ಲಿ ತಾ,17,20, 22, 24,ರಂದು ಅಗೇಲು ಸೇವೆ ಇರುವುದಿಲ್ಲ. ತಾ, 27.29.31 ಅಗೇಲು ಸೇವೆ ನಡೆಯುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Read More

ಬಂಟ್ವಾಳ: ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ಮೃತಪಟ್ಟ ಘಟನೆ ನಡೆದಿದೆ. ಸ್ಥಳೀಯ ನಾಟಿ ನಿವಾಸಿ ರಕ್ಷಿತ್ ಶೆಟ್ಟಿ ಮೃತ ಬೈಕ್ ಸವಾರನಾಗಿದ್ದಾನೆ. ಪಾಣೆಮಂಗಳೂರಿನಲ್ಲಿ ಎರಡು ಬೈಕ್ ಗಳ ಮಧ್ಯೆ ಶುಕ್ರವಾರ ರಾತ್ರಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ರಕ್ಷಿತ್ ಶೆಟ್ಟಿಯವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆದರೆ ದೇಹ ಚಿಕಿತ್ಸೆಗೆ ಸ್ಪಂಧಿಸದೆ ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ. ಮೃತ ರಕ್ಷಿತ್ ಪಾಣೆಮಂಗಳೂರು ಬಳಿಯ ನಾಟಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ವಿಡಿಯೋಗ್ರಾಫರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಭಾನುವಾರ ಅವರ ಮಗಳ ಹುಟ್ಟುಹಬ್ಬವಿದ್ದು ಮನೆಮಂದಿ ಸಿದ್ದತೆ ನಡೆಸಿದ್ದರು. ಈ ನಡುವೆ ಈ ದುರ್ಘಟನೆ ಮನೆ ಮಂದಿಯನ್ನು ಕಂಗೆಡಿಸಿದೆ. ಇವರ ಸಹೋದರ ರಂಜಿತ್ ಶೆಟ್ಟಿ ಕೆಲ ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಸೊಂಟದ ಕೆಳಭಾಗ ಬಲಹೀನರಾಗಿ…

Read More

ಬಂಟ್ವಾಳ : ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿನಿ ಭಾರ್ಗವಿ ಯು.ಎಸ್ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಎಂ.ಕಾಂ ಪರೀಕ್ಷೆಯಲ್ಲಿ 7ನೇ ರ್ಯಾಂಕ್ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಇವರು ಪುಂಜಾಲಕಟ್ಟೆಯ ನಿವಾಸಿ ಉಮಾನಾಥ್ ಮತ್ತು ಶ್ರೀಲತಾ ಎಂ.ಜೆ ದಂಪತಿಯ ಪುತ್ರಿಯಾಗಿದ್ದು, ಕಳೆದ ಬಾರಿಯ ಕೆ-ಸೆಟ್ (ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ) . ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 97ನೇ ರ್ಯಾಂಕ್ ಪಡೆದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿದ್ದರು.

Read More