Author: admin

ಬಂಟ್ವಾಳ: ಬಂಟ್ವಾಳ ತಾಲೂಕಿನ ಬೊಳ್ಳಾಯಿಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 12 ನೇ ಶಾಖೆಯು ಕಂಬಳಬೆಟ್ಟು ದರ್ಬಾರ್ ಕಾಂಪ್ಲೆಕ್ಸ್ ನಲ್ಲಿ ರವಿವಾರ ಶುಭಾರಂಭಗೊಂಡಿತು. ಮಾಜಿ ಸಚಿವ ಬಿ. ರಮಾನಾಥ ರೈ ಅವರು ನೂತನ ಶಾಖೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಆಶಯದಂತೆ ಗ್ರಾಮೀಣ ಜನರ ಆರ್ಥಿಕ ಸಬಲೀಕರಣಕ್ಕೆ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಪೂರಕವಾಗಿದೆ. ಮೂವತ್ತು ವರ್ಷಗಳ ಹಿಂದೆ ಮೂರ್ತೆದಾರರ ಆರ್ಥಿಕತೆಯ ಉದ್ದೀಪನದ ಬೀಜವನ್ನು ಬಿತ್ತಿದ್ದ ಸಂಘದ ಅಧ್ಯಕ್ಷ ಸಂಜೀವ ಪೂಜಾರಿಯವರ ಅಂದಿನ ಕನಸು ಇಂದು ನನಸಾಗಿದೆ ಎಂದರು. ಸಂಘ ಎಲ್ಲ ಜನ ಸಮುದಾಯದ ಸಹಕಾರದಿಂದಾಗಿ ಅತ್ಯಂತ ವೇಗವಾಗಿ ಮತ್ತು ಜನಪರವಾದ ಸಹಕಾರಿ ಸಂಘವಾಗಿ ಬೆಳೆದಿದೆ ಎಂದರು. ಸಂಘ ಇನ್ನಷ್ಟು ಶಾಖೆಗಳನ್ನು ತೆರೆಯುವ ಮೂಲಕ ಯಶಸ್ವಿಯಾಗಲಿ ಎಂದು ಹಾರೈಸಿದರು. Advertisement ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು…

Read More

ಜೆಸಿಐ ಬಂಟ್ವಾಳದ ವತಿಯಿಂದ ಆನ್‌ಲೈನ್‌ನಲ್ಲಿ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಬಂಟ್ವಾಳ: ಜೆಸಿಐ ಬಂಟ್ವಾಳ ವತಿಯಿಂದ ಬಂಟ್ವಾಳ ತಾಲೂಕಿನ ಮಕ್ಕಳಿಗಾಗಿ ಆನ್‌ಲೈನ್ ಗಣೇಶ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. Advertisement Advertisement 1ರಿಂದ 4ನೇ ತರಗತಿ ಮಕ್ಕಳಿಗೆ ಬಾಲಗಣೇಶ, 5ರಿಂದ7 ತರಗತಿ ಮಕ್ಕಳಿಗೆ ಮೂರ್ತಿ ಗಣೇಶ, 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಚೌತಿಯ ಸಂಭ್ರಮದ ಚಿತ್ರವನ್ನು ಬಿಡಿಸಬೇಕಾಗಿದ್ದು ಎ4 ಅಳತೆಯ ಬಿಳಿ ಹಾಳೆಯಲ್ಲಿ ಚಿತ್ರ ಬಿಡಿಸಿ ಚಿತ್ರದ ಕೆಳಗೆ ಮೊಬೈಲ್ ಸಂಖ್ಯೆ ನಮೂದಿಸಬೇಕು, ಪ್ರತೀ ವಿಭಾಗದಲ್ಲೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಹಾಗೂ ಪ್ರಶಸ್ತಿ ಪತ್ರ ಇದ್ದು ಬಿಡಿಸಿದ ಚಿತ್ರವನ್ನು ಸೆ. 10 ರ ಒಳಗಾಗಿ 9164977096 ಈ ದೂರವಾಣಿಯ ವಾಟ್ಸಫ್ ಗೆ ಕಳುಹಿಸುವಂತೆ ಕೋರಲಾಗಿದೆ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು ವಿಜೇತರಿಗೆ ಸೆ. 15ರಂದು ನಡೆಯುವ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಬಹುಮಾನ ನೀಡಲಾಗುವುದು, ಹಾಗೂ ಅದೇ ಚಿತ್ರ ವಿಜೇತ ಮಕ್ಕಳ ಚಿತ್ರವನ್ನು ಪ್ರದರ್ಶಿಸಲಾಗುವುದು ಹೆಚ್ಚಿನ ಮಾಹಿತಿಗಾಗಿ 9449167316, 9008041979…

Read More

ಸೆ. 17: ಪೊಸಳ್ಳಿ ಕುಲಾಲ ಭವನದಲ್ಲಿಬಂಟ್ವಾಳ ಕುಲಾಲ ಸೇವಾದಳದ ವತಿಯಿಂದಕೃಷ್ಣ ಕೃಷ್ಣ ಶ್ರೀಕೃಷ್ಣಾ – ಕೃಷ್ಣ ವೇಷ ಸ್ಪರ್ಧೆ ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ರಿ. ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳದ ವತಿಯಿಂದ ಸೆಪ್ಟಂಬರ್ 17ರಂದು ಬಿ.ಸಿ.ರೋಡಿನ ಪೊಸಳ್ಳಿ ಬಳಿಯ ಕುಲಾಲ ಸಮುದಾಯ ಭವನದಲ್ಲಿ ಕೃಷ್ಣ ಕೃಷ್ಣ ಶ್ರೀಕೃಷ್ಣ – ಎಂಬ ಕುಲಾಲ ಬಾಂಧವರಿಗಾಗಿ ಕೃಷ್ಣ ವೇಷ ಸ್ಪರ್ಧೆ, ನನ್ನ ಕನಸಿನ ಕೃಷ್ಣ- ಚಿತ್ರಕಲಾ ಸ್ಪರ್ಧೆ ಮತ್ತು ಕುಸಾಲ್ ಪಾತೆರದ ಬಿರ್ಸೆರ್ – ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.6 ತಿಂಗಳಿನಿಂದ 5 ವರ್ಷದೊಳಗಿನ ಮಕ್ಕಳಿಗೆ ಮುದ್ದು ಕೃಷ್ಣ ವೇಷ, 5ರಿಂದ ಮೇಲ್ಪಟ್ಟು 10 ವರ್ಷದೊಳಗಿನ ಮಕ್ಕಳಿಗೆ ಬಾಲಕೃಷ್ಣ, ರಾಧಾಕೃಷ್ಣ ಮತ್ತು ಯಶೋಧಾ ಕೃಷ್ಣ ಸ್ಪರ್ಧೆಗೆ ಯಾವುದೇ ವಯೋಮಿತಿ ಇರುವುದಿಲ್ಲ. ಚಿತ್ರಕಲೆಯಲ್ಲಿ ಕಿರಿಯ ಮತ್ತು ಹಿರಿಯ ವಿಭಾಗಗಳಿರುತ್ತದೆ. ಕುಸಾಲ್ ಪಾತೆರದ ಬಿರ್ಸೆರ್ ಸ್ಪರ್ಧೆಯಲ್ಲಿ ಯಾವುದೇ ವಯೋಮಿತಿ ಇರುವುದಿಲ್ಲ. ಆದರೆ ಹಾಸ್ಯದಲ್ಲಿ ರಾಜಕೀಯ, ಜಾತಿನಿಂದನೆ ಮತ್ತು ಅಶ್ಲೀಲ ಮಾತುಗಳನ್ಙು ಬಳಸುವಂತಿಲ್ಲ. Advertisement ವೇದಿಕೆಯಲ್ಲಿ…

Read More

ಮಂಗಳೂರು: ಸಂಬಳಗ್ ತುಳುಟ್ಟು ದಾದ ಪನ್ಪೆರ್…?, ನವೀನ್ ಡಿ.ಪಡೀಲ್ ನಡುಬೈಲ್ ನಾರಾಯಣೆ ಪಾತ್ರ ಮಲ್ತಿನ ನಾಟಕ ಒವು..?, ಅಜಬಿರು ಪಂಡ ಎಂಚಿನ…? ಕ್ಯಾವಂಡೀಸ್ ಪರ್‌ಂದ್‌ನ್ ದಕ್ಷಿಣ ಕನ್ನಡ ಜಿಲ್ಲೆಗ್ ಪರಿಚಯ ಮಲ್ದಿನ ಕೃಷಿಕೆರ್ ಏರ್…?ಹೀಗೆ ತುಳುನಾಡಿನ ಸಂಸ್ಕೃತಿ, ಆಚಾರ ವಿಚಾರ, ಭಾಷೆ, ಸಾಧಕರ ಬಗ್ಗೆ ಬೆಳಕು ಚೆಲ್ಲುವ ತುಳು ಪ್ರಶ್ನಾವಳಿ ಮಂಗಳೂರಿನಲ್ಲಿ ಹರಿದಾಡುತ್ತಿದೆ. ಕಾವೂರಿನ ಶಾಂತಿನಗರದ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ನಡೆಯುವ ಗಣೇಶೋತ್ಸವ ಪ್ರಯುಕ್ತ 100 ಪ್ರಶ್ನೆಗಳ ರಸಪ್ರಶ್ನೆ ತಯಾರಿಸಲಾಗಿದ್ದು, ತುಳುನಾಡಿನ ಸಮಗ್ರ ವಿಷಯದ ಬಗ್ಗೆ ಬೆಳಕು ಚೆಲ್ಲುತ್ತಿದೆ. ಕೃಷಿ, ತುಳುನಾಡಿನ ಸಾಧಕರು, ಒಗಟುಗಳು, ತುಳುನಾಡಿನ ದೇವಸ್ಥಾನ, ದೈವಸ್ಥಾನಗಳು, ನಾಟಕ, ಯಕ್ಷಗಾನ, ಕಂಬಳ, ಸಿನಿಮಾ ಇತ್ಯಾದಿ ಹಲವು ವಿಷಯಗಳ ಬಗ್ಗೆ ಪ್ರಶ್ನೆ ಸಿದ್ಧಪಡಿಸಲಾಗಿದೆ. Advertisement ಮಣಿಮೇಖಲೆ, ರತ್ನಕಂಕಣ ಪ್ರಸಂಗ ಬರೆದವರು ಯಾರು?, ರಂಗಾಯಣ ರಘು ಅಭಿನಯಿಸಿದ ತುಳುವಿನ ಸಿನಿಮಾ ಯಾವುದು?, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಅಭಿಯಾನ ಮಲ್ತೊಂದುಪ್ಪುನ ತುಳುನಾಡ್ದ ಸಂಸ್ಥೆ ಒವು…..?ಹೀಗೆ ಮರೆತು ಹೋಗಿರುವ ತುಳು ಭಾಷೆಯ ಶಬ್ದಗಳ ಬಗ್ಗೆಯೂ…

Read More

ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿ 352 ನೇ ಆರಾಧನಾ ಮಹೋತ್ಸವ ಶುಕ್ರವಾರ ನಡೆಯಿತು.ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಮಾರ್ಗದರ್ಶನ ದಲ್ಲಿ ಗುರುಪೂಜೆ ಸಹಿತ ವಿಶೇಷ ಪೂಜೆ ಮತ್ತು ಮಂತ್ರಾಕ್ಷತೆ ನೆರವೇರಿತು. ಇದೇ ವೇಳೆ ಶ್ರೀ ಮಹಾಗಣಪತಿ, ಗಾಯತ್ರೀ ದೇವಿ ಮತ್ತು ನಾಗದೇವರಿಗೆ ವಿಶೇಷ ಪೂಜೆ ನಡೆಯಿತು. Advertisement ಪಿಲಿಂಗಾಲು: ಶ್ರೀ ಗಾಯತ್ರಿ ದೇವಿ ದೇವಸ್ಥಾನಶ್ರೀ ಗುರು ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಕಾರಿಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯಎಂ.ತುಂಗಪ್ಪ ಬಂಗೇರ, ಪ್ರಮುಖರಾದ ಬಿ.ರಘು ಸಪಲ್ಯ ಪಾಣೆಮಂಗಳೂರು, ನಾಗೇಶ ಕಲ್ಲಡ್ಕ, ಉಮೇಶ ಬೋಳಂತೂರು, ಜಯಪ್ರಕಾಶ್ ತುಂಬೆ, ಎಂ.ಬೂಬ ಸಪಲ್ಯ ಮುಂಡಬೈಲು, ನವೀನ ಕೋಟ್ಯಾನ್ ಬಿ.ಸಿ.ರೋಡು, ಕೆ.ಬಾಬು ಸಪಲ್ಯ ವಗ್ಗ, ಮೋಹನ್ ಕೆ.ಶ್ರೀಯಾನ್ ರಾಯಿ, ಜಗದೀಶ ಕುಂದರ್ ಭಂಡಾರಿಬೆಟ್ಟು,ಕೆ.ಟಿ.ಸುಧಾಕರ್ ಇರಾ, ಸೀತಾರಾಮ ಅಗೋಳಿಬೆಟ್ಟು, ಚಂದ್ರಶೇಖರ ಶೆಟ್ಟಿ…

Read More

ಮಾತೃತ್ವದ ಶಕ್ತಿ ಅಪೂರ್ವವಾದುದು: ರೇಖಾ ಸತೀಶ್ ಬಂಟ್ವಾಳ : ಯಾರಿಂದಲೂ, ಯಾವುದರಿಂದಲೂ ತೀರಿಸಲಾಗದ್ದು ಅದು ತಾಯಿಋಣ‌. ತಾಯಿ ವ್ಯಕ್ತಿತ್ವ ರೂಪಿಸುವ ಶಕ್ತಿಯಾಗಿದ್ದಾಳೆ.‌ ಪ್ರತೀ ಮನುಷ್ಯನ ಯಶಸ್ಸಿನ‌ ಹಿಂದೆ ತಾಯಿ ಮಾತೃ ಪ್ರೇರಕ ಶಕ್ತಿಯಾಗಿದ್ದಾಳೆ, ಮನೆಯೇ ಮೊದ ಪಾಠ ಶಾಲೆ ತಾಯಿಯೇ ಮೊದಲ ಗುರು ಎನ್ನುವಂತೆ ತಾಯಿಯ ಪಾತ್ರ ಕುಟುಂಬದಲ್ಲಿ ಮಹತ್ತರವಾದುದುದು ಎಂದು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಪೊಳಲಿ ನಗರದ ಮಾರ್ಗದರ್ಶಕಿ ರೇಖಾ ಸತೀಶ್ ಕಾಜಿಲ ಅಭಿಪ್ರಾಯ ಪಟ್ಟರು.ಅವರು ಕೊಯಿಲ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ಭಜನಾ‌ ಮಂಡಳಿ ಬದನಡಿ ಇಲ್ಲಿ ನಡೆದ “ಮಾತೃ ಧ್ಯಾನ-ಮಾತೃ ಪೂಜನ” ಕಾರ್ತಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಲೆಕ್ಕಪತ್ರ ಪ್ರಮುಖ್ ಶಿವಪ್ರಸಾದ್ ಪೊಳಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತೃಪೂಜನ ಕಾರ್ಯಕ್ರಮವೂ ಗ್ರಾಮದ ವಿಕಾಸಕ್ಕೆ ಪೂರಕವಾದುದು, ಸಂಸ್ಕಾರಯುತ ಶಿಕ್ಷಣ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಮಾತೃಶಕ್ತಿಯ ಪ್ರಾಮುಖ್ಯತೆಯ ಬಗ್ಗೆ ತಿಳಿಸಿ ಮಾತೃಧ್ಯಾನ-ಮಾತೃಪೂಜನ ಕಾರ್ಯಕ್ರಮ‌ ನೇರವೇರಿಸಿದರು. ಕಾರ್ಯಕ್ರಮದ…

Read More

ಸೆ.3: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 12ನೇ ಕಂಬಳಬೆಟ್ಟು ಶಾಖೆ ಉದ್ಘಾಟನೆ ಬಂಟ್ವಾಳ: ತಾಲೂಕಿನ ಗ್ರಾಮೀಣ ಪ್ರದೇಶವಾದ ಸಜೀಪಮೂಡ ಗ್ರಾಮದಲ್ಲಿ ಸ್ಥಾಪನೆಗೊಂಡ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಕನಿಷ್ಠ ಅವಧಿಯಲ್ಲಿಯೇ ಗರಿಷ್ಠ ಸಾಧನೆಯನ್ನು ಮಾಡಿಕೊಂಡು ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲನ್ನು ಸಾಧಿಸಿಕೊಂಡು ಮುನ್ನಡೆಯುತ್ತಿದೆ. ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಮುಂದಾಳತ್ವದಲ್ಲಿ, ಅನುಭವಿ ನಿರ್ದೇಶಕರ ಮಾರ್ಗದರ್ಶನದಲ್ಲಿ, ಕ್ರಿಯಾಶೀಲ ಸಿಬ್ಬಂದಿಗಳ ಸಹಕಾರದೊಂದಿಗೆ ಸಂಘ ಲಾಭದಾಯಕವಾಗಿ ಪ್ರಗತಿಯ ಹೆಜ್ಜೆ ಇಟಿದ್ದು ಸಂಘದ 12ನೇ ಕಂಬಳಬೆಟ್ಟು ಶಾಖೆ ಉದ್ಘಾಟನೆಗೆ ಸಜ್ಜುಗೊಂಡಿದೆ. Advertisement ಸೆ. 3 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ವಿಟ್ಲ ಸಮೀಪದ ಕಂಬಳಬೆಟ್ಟು ದರ್ಬಾರ್ ಕಾಂಪ್ಲೆಕ್ಸ್ನಲ್ಲಿ ಸಂಘದ ನೂತನ 12ನೇ ಶಾಖೆಯನ್ನು ಕಲ್ಬುರ್ಗಿಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠಾಧಿಪತಿ ಶ್ರೀ ಡಾ| ಪ್ರಣವಾನಂದ ರಾಮ್ ಸ್ವಾಮೀಜಿ ಉದ್ಘಾಟಿಸುವರು, ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ…

Read More

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಸಂದೇಶ, ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಅವರ ಜನ್ಮದಿಚಾರಣೆ ಅರ್ಥಪೂರ್ಣವಾಗುತ್ತದೆ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು.ಯುವ ವಾಹಿನಿ ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಬೆಂಜನಪದವಿನಲ್ಲಿರುವ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ಗುರುವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 169 ನೇ ಜನ್ಮದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾರಾಯಣ ಗುರುಗಳು ಅಂದಿನ ಕಾಲದಲ್ಲಿ ಸಮಾಜದಲ್ಲಿದ್ದ ಜಾತಿ ಪದ್ದತಿ, ಅಸ್ಪ್ರಶ್ಯತೆ, ಅಸಮಾನತೆಯನ್ನು ತೊಡೆದು ಹಾಕಿ ಶೋಷಿತ, ದುರ್ಬಲ ವರ್ಗದವರ ಏಳಿಗೆಗಾಗಿ ಮೌನ ಕ್ರಾಂತಿ ಮಾಡಿದ ಶ್ರೇಷ್ಠ ದಾರ್ಶನಿಕ, ಅವರು ತೋರಿದ ಹಾದಿಯಲ್ಲಿ ಸಾಗಿ ಮಾನವೀಯ ಮೌಲ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿರುವ ಪ್ರತಿಯೊಬ್ಬರಲ್ಲೂ ಮಾನವ ಧರ್ಮವನ್ನು ಕಂಡಾಗ ಗುರುಗಳ ಆದರ್ಶ ಪಾಲನೆಯಾದಂತಾಗುತ್ತದೆ ಎಂದು ತಿಳಿಸಿದರು. Advertisement ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಕ್ಲಬ್ ಬಿ.ಸಿ.ರೋಡು ಸಿಟಿಯ ಪೂರ್ವಾಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ ಯುವವಾಹಿನಿ, ವಸತಿ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣ…

Read More

ಮಧ್ವ: ಹೃದಯಾಘಾತದಿಂದ ಯುವತಿ ಸಾವು ಪುಂಜಾಲಕಟ್ಟೆ : ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ.ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟವರಾಗಿದ್ದಾರೆ. ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, Advertisement ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್‌ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ ಮನೆಯಲ್ಲಿ ತಾಯಿ ಜತೆ ವಾಸವಿದ್ದರು. ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿ ಜತೆ ಮಲಗಿದ್ದರು. ಬೆಳಗ್ಗೆ ಹೊತ್ತು ಕಳೆದರೂ ಏಳದಿರುವುದನ್ನು ಗಮನಿಸಿದ ತಾಯಿ ಎಬ್ಬಿಸುವಾಗ ಅವರು ಮೃತ ಪಟ್ಟಿರುವುದು ತಿಳಿದು ಬಂದಿದೆ. ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸಾವಿಗೆ ಹೃದಯಾಘಾತ ಕಾರಣವೆಂದು ವೈದ್ಯರು ತಿಳಿಸಿದ್ದಾರೆ. ನಂತರ ಮೃತ ದೇಹವನ್ನು ಹೆಚ್ಚಿನ ಪರೀಕ್ಷೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿತ್ತು.ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಮಿತ್ರಾ ಅವರು ಪದವೀಧರೆಯಾಗಿದ್ದು, ಸ್ಥಳೀಯವಾಗಿ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

Read More

ಬಂಟ್ವಾಳ: ಅಕ್ರಮವಾಗಿ ಮರ ಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಬಮಟ್ವಾಳ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.7 ಲಕ್ಷ ರುಪಾಯಿ ಮೌಲ್ಯದ ವಾಹನ ಮತ್ತು ಸೊತ್ತುಗಳನ್ನು ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಮಂಗಳವಾರ ಬಿ. ಮೂಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ ಜಂಕ್ಷನ್ ನಲ್ಲಿ ಅಕ್ರಮವಾಗಿ ವಿವಿಧ ಜಾತಿಯ ಕಟ್ಟಿಗೆಯನ್ನು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ ಉಪವಲಯ ಅರಣ್ಯಾಧಿಕಾರಿ ಪ್ರೀತಮ್ ಎಸ್ ,ಯಶೋಧರ ,ಗಸ್ತು ಅರಣ್ಯ ಪಾಲಕರಾದ ಜಿತೇಶ್ ಪಿ., ದಯಾನಂದ ,ಶೋಭಿತ್ ,ಹಾಗೂ ಇಲಾಖಾ ವಾಹನ ಹಂಗಾಮಿ ಚಾಲಕ ಜಯರಾಮ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ. Advertisement ಪ್ರಕರಣದ ಮುಂದಿನ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್ ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ ಇವರ ಮಾರ್ಗದರ್ಶನದಲ್ಲಿ…

Read More