Author: admin
ಬಂಟ್ವಾಳ: ಸರಕಾರದ ಸುತ್ತೋಲೆಯಂತೆ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಆ.30 ರಂದು ಸರ್ಕಾರದ ಮಟ್ಟದಲ್ಲಿ ಮೈಸೂರಿನಲ್ಲಿ ಪೂರ್ವಾಹ್ನ 12 ರಿಂದ ಅಪರಾಹ್ನ 1 ಗಂಟೆವರೆಗೆ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಫಲಾನುಭವಿಗಳು ವೀಕ್ಷಿಸಲು ರಾಜ್ಯದ ವಿವಿಧ ಕಡೆಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲು ಸರ್ಕಾರದ ಆದೇಶಿಸಿದೆ. Advertisement ಬಂಟ್ವಾಳ ಪುರಸಭಾ ವ್ಯಾಪ್ತಿಯ 4 ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು ಪುರಸಭಾ ಕಛೇರಿ ಸಭಾಂಗಣ, ಕೈಕಂಬ ಸೂರ್ಯವಂಶ ಕಟ್ಟಡದ ಸಭಾಂಗಣ, ಬಿ.ಸಿ.ರೋಡು ರಂಗೋಲಿ ಹೊಟೇಲ್ ಸಭಾಂಗಣ, ಮೆಲ್ಕಾರ್ ಬಿರ್ವ ಸೆಂಟರ್ ಸಭಾಂಗಣದಲ್ಲಿ ಏಕಕಾಲಕ್ಕೆ ಪ್ರಸಾರ ನಡೆಯಲಿದೆ. ಈ ಕಾರ್ಯಕ್ರಮವು ಮೈಸೂರಿನಿಂದ ಫಲಾನುಭವಿಗಳು ವೀಕ್ಷೀಸಲು ಮೇಲ್ಕಾಣಿಸಿದ ಕೇಂದ್ರಗಳಲ್ಲಿ ವ್ಯವಸ್ಥೆಗೊಳಿಸಲಾಗಿದೆ ಎಂದು ಪುರಸಭೆಯ ಪ್ರಕಟಣೆ ತಿಳಿಸಿದೆ.
ರಿಕ್ಷಾಕ್ಕೆ ಗುದ್ದಿದ ಕಾರು, ತೀವ್ರ ಗಾಯಗೊಂಡ ರಿಕ್ಷಾ ಚಾಲಕ Advertisement ಬಂಟ್ವಾಳ: ಬಿ.ಸಿ.ರೋಡಿನ ರೈಲು ನಿಲ್ದಾಣ ಬಳಿ ರಿಕ್ಷಾ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಘಟನೆಯ ತೀವ್ರತೆಗೆ ರಿಕ್ಷಾ ಮುಖಭಾಗ ನುಜ್ಜುಗುಜ್ಜಾಗಿದ್ದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರುಶೀಲನೆ ನಡೆಸುತ್ತಿದ್ದಾರೆ.
ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ವತಿಯಿಂದ ಉಚಿತ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಡ್ ಹಾಗೂ ಸಸಿ ವಿತರಣ ಕಾರ್ಯಕ್ರಮ ಬಂಟ್ವಾಳ: ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ ಇದರ ವತಿಯಿಂದ ಉಚಿತ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಡ್ ಹಾಗೂ ಸಸಿ ವಿತರಣ ಕಾರ್ಯಕ್ರಮ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು. Advertisement ಕಾರ್ಯಕ್ರಮವನ್ನು ಹಿರಿಯ ತೋಟಗಾರಿಕಾ ನಿರ್ದೇಶಕ ಜೋ ಪ್ರದೀಪ್ ಡಿಸೋಜಾ ಉದ್ಘಾಟಿಸಿ ಮಾತನಾಡಿ ಗಿಡಗಳು ಹೇಗೆ ಸದೃಢವಾಗಿ ಬೆಳೆಯಲು ನೀರು, ಗೊಬ್ಬರ, ಪೋಷಕಾಂಶಗಳು ಅಗತ್ಯವೋ ಅದೆ ರೀತಿ ಸಮುದಾಯದ ಯುವಕ ಯುವತಿಯರಿಗೆ ಸರಿಯಾದ ಮಾರ್ಗದರ್ಶನ ನೀಡಿದಾಗ ಅವರು ಸಮಾಜದಲ್ಲಿ ಉತ್ತಮ ಉದ್ಯೋಗ ಪಡೆದು ಸದೃಢವಾದ ಜೀವನ ನಡೆಸಲು ಸಾದ್ಯವಿದೆ. ಉತ್ತಮ ಪರಿಶ್ರಮದಿಂದ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.ಬಂಟ್ವಾಳ ತಾಲೂಕು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ಅಧ್ಯಕ್ಷ…
ಬಂಟವಾಳ ಬಂಟರ ಸಂಘದಿಂದ 1,750 ವಿದ್ಯಾರ್ಥಿಗಳಿಗೆ 52 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ
ಬಂಟವಾಳ ಬಂಟರ ಸಂಘದಿಂದ 1,750 ವಿದ್ಯಾರ್ಥಿಗಳಿಗೆ 52 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಬಂಟ್ವಾಳ: ಬಂಟರ ಸಂಘ ಬಂಟವಾಳ ಮತ್ತು ಮುಂಬೈಯ ಆಲ್ ಕಾರ್ಗೋಲಾಜೆಸ್ಟಿಕ್ಸ್ ಸಂಸ್ಥೆಯ ಅಧ್ಯಕ್ಷ ಶಶಿಕರಣ್ ಶೆಟ್ಟಿ ಅವರ ಸಹಯೋಗದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಡಿ 4 ನೇ ವರ್ಷದ ಬಂಟ್ವಾಳ ತಾಲೂಕಿನ ಸರ್ವ ಸಮಾಜದ ಸುಮಾರು 1,750 ವಿದ್ಯಾರ್ಥಿಗಳಿಗೆ 52 ಲಕ್ಷ ರೂ.ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ರವಿವಾರ ಬ್ರಹ್ಮರಕೊಟ್ಲವಿನಲ್ಲಿರುವ ಬಂಟವಾಳ ಬಂಟರ ಭವನದಲ್ಲಿ ನಡೆಯಿತು. Advertisement ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಕೆ. ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಶಿಕ್ಷಣದಿಂದ ಮಾತ್ರ ಸಮಾಜದ ಬೆಳೆವಣಿಗೆ ಸಾಧ್ಯ,ಮುಂಬೈ ಬಂಟರ ಸಂಘ ವು ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪೂರಕವಾಗಿ ದತ್ತು ಪಡೆಯುವುದು, ಬಡ್ಡಿರಹತ ಸಾಲ,ನೇರವಾಗಿ ವಿದ್ಯಾಸಂಸ್ಥೆಗೆ ಪೀಸ್ ಪಾವತಿ,ಶಿಕ್ಚಣ ಸಂಸ್ಥೆಗಳ ನಿರ್ಮಾಣ ಸಹಿತ ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ನೆರವು ನೀಡುತ್ತಿದೆ.ಅದೇ ಮಾದರಿಯಲ್ಲಿಬಂಟ್ವಾಳ ಬಂಟರ ಸಂಘ ಕೂಡ ಸಾಮಾಜಿಕ,ಶೈಕ್ಷಣಿಕ…
ತುಂಬೆಯಲ್ಲಿ ಪ್ರತಿಭಾ ಸ್ಪರ್ಧೆ Advertisement ಬಂಟ್ವಾಳ: ಸ್ಪರ್ಧೆ ಎನ್ನುವುದು ವಿದ್ಯಾರ್ಥಿ ಜೀವನದಿಂದಲೇ ಆರಂಭವಾದಾಗ ಭವಿಷ್ಯದ ಸ್ಪರ್ಧಾತ್ಮಕ ಜೀವನವನ್ನು ಎದುರಿಸಲು ಸಾಧ್ಯವಾಗುತ್ತದೆ. ಇದರಿಂದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲೂ ಸುಲಭವಾಗುತ್ತದೆ ಎಂದು ತುಂಬೆ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್.ಗಂಗಾಧರ ಆಳ್ವ ಹೇಳಿದರು. Advertisement ಅವರು ತುಂಬೆ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ಅಂತರ್ ತರಗತಿ ಪ್ರತಿಭಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.ತುಂಬೆ ಪ.ಪೂ.ಕಾಲೇಜಿನ ಉಪನ್ಯಾಸಕ ಅಬ್ದುಲ್ ರಹಿಮಾನ್ ಡಿ.ಬಿ.,ಡಾ.ವಿಶ್ವನಾಥ ಪೂಜಾರಿ,ಕಾರ್ಯಕ್ರಮ ಸಂಯೋಜಕಿ ಅಖಿಲಾ, ಪ್ರೌಢಶಾಲಾ ವಿಭಾಗದ ಅಧ್ಯಾಪಕ ರಮೇಶ್ ಮೆಲ್ಕಾರ್,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಣ ನಿರ್ದೇಶಕ ಸಾಯಿರಾಮ್ ನಾಯಕ್ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು,ಉಪನ್ಯಾಸಕಿ ನೀತಾಶ್ರೀ ನಿರೂಪಿಸಿದರು.
ಬಂಟ್ವಾಳ :2023.24 ನೇ ಸಾಲಿನಶ್ರೀ ರಾಮ ಗೆಳೆಯರ ಬಳಗ ಕೈಕಂಬ, ಬಿ ಸಿ ರೋಡು ಇದರ 36 ನೇ ವರ್ಷದವಾರ್ಷಿಕ ಮಹಾಸಭೆಯು ಇಂದು ಆದಿತ್ಯವಾರ ಶ್ರೀ ರಾಮ ಗೆಳೆಯರ ಬಳಗ ಕೈಕಂಬ ಸಂಘದ ಸಭಾಭವನದಲ್ಲಿಹರೀಶ್ ಪಣೆಕಲ ಪಡ್ಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ನೂತನ ಅಧ್ಯಕ್ಷರಾಗಿ ಸದಾಶಿವ ಕೈಕಂಬ, ಆಯ್ಕೆಯಾಗಿದ್ದಾರೆ. Advertisement Advertisement ಉಪಾಧ್ಯಕ್ಷರಾಗಿ ರಮೇಶ್ ಕೊಡಂಗೆ,ಗೌರವ ಅಧ್ಯಕ್ಷರಾಗಿ ಸುರೇಶ್ ಕುಮಾರ್, ಸಂಘದ ಸಲಹೆಗಾರರಾಗಿ ಹರೀಶ್ ಪಣೆಕಲಪಡ್ಪು, ಕಾರ್ಯದರ್ಶಿಯಾಗಿ ಅಕ್ಷಯ್ ಸಾಲಿಯಾನ್ ,ಜೊತೆ ಕಾರ್ಯದರ್ಶಿಯಾಗಿ ವಿಕೇಶ್ ಸುವರ್ಣ, ಲೆಕ್ಕಪರಿಶೋಧಕರಾಗಿತಾರಾನಾಥ್ ಕುಲಾಲ್, ಜಗದೀಶ್,ಸಂಘಟನಾ ಕಾರ್ಯದರ್ಶಿಯಾಗಿ ಶಶಿ ಪೂಜಾರಿ, ಸುರೇಶ್ ಪೂಜಾರಿ, ಸಂಘಟನಾ ಸದಸ್ಯರಾಗಿ ನಾಗೇಂದ್ರ ನಾಯಕ್.ಕಾರ್ಯಕಾರಿ ಸಮಿತಿಯಾಗಿ ಲೋಕೇಶ್ ಪರ್ಲಿಯ,ಉಮೇಶ್ ಬಂಗೇರ ಕೊಡಂಗೆ,ಸುಬ್ರಹ್ಮಣ್ಯ ಮಿತ್ತ ಪರಾರಿ, ರಾಜೇಶ್ ಮೈರ,ಕರುಣಾಕರ ಶೆಟ್ಟಿ ,ವಸಂತ ಪೂಜಾರಿ, ಹೇಮಂತ್ ಬಂಟ್ವಾಳ, ವಿಶ್ವನಾಥ ಬಂಟ್ವಾಳ, ಶೈಲೇಶ್ ಕೈಕಂಬ, ನವೀನ್ ಕುಲಾಲ್, ಉಮೇಶ್ ಕಲ್ಲಡ್ಕ, ಸತ್ಯೇಂದ್ರ, ಯೋಗೀಶ್ ಕೈಕಂಬ,ಸಚಿನ್ ಇವರು ಆಯ್ಕೆಯಾಗಿಇತರ 14ಸದಸ್ಯರನ್ನುಸಂಘಟನಾ ಸದಸ್ಯರಾಗಿ ಆಯ್ಕೆ ಮಾಡಲಾಯಿತು.
ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ Advertisement ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘವು ೨೦೨೨-೨೦೨೩ ನೇ ಸಾಲಿನಲ್ಲಿ ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಉತ್ತಮ ಸೇವೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ೨೦೨೨-೨೦೨೩ ನೇ ಸಾಲಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಇವರು ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಮಮತಾ ಜಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು. Advertisement ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಭಾಸ್ಕರ ಕೋಟ್ಯಾನ್, ಡಾ. ದೇವಿಪ್ರಸಾದ್ ಶೆಟ್ಟಿ, ಎಸ್.ಬಿ. ಜಯರಾಮ್ ರೈ, ಶಶಿಕುಮಾರ್ ರೈ ಬಿ. ಹೆಚ್.ಎನ್. ರಮೇಶ್ ಹಾಗೂ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ನಿರ್ದೇಶಕರಾದ ಜಯಶಂಕರ್ ಕಾನ್ಸಾಲೆ, ಅಶೋಕ್ ಕುಮಾರ್ ಕೋಮಾಲಿ ಹಾಗೂ ಸಂಘದ ಎಜಿಎಂ ಶಿಲ್ಪಾ ಗಣೇಶ್ ಉಪಸ್ಥಿತರಿದ್ದರು. Advertisement
ಬಂ.ತಾ. ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ Advertisement ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕ ಹಾಗೂ ಸೇವಾದಳದ ಸಹಕಾರದೊಂದಿಗೆ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ನಡೆಯಿತು. ಈ ಸಂದರ್ಭ ಶ್ರೀ ರಕ್ತೇಶ್ವರೀ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿಶ್ವನಾಥ ಬಿ., ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ, ಕಾರ್ಯದರ್ಶಿ ಕೇಶವ ಮಾಸ್ಟರ್ ಮಾರ್ನಬೈಲು, ಕೋಶಾಧಿಕಾರಿ ರಮೇಶ್ ಸಾಲ್ಯಾನ್, ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ಮಚ್ಚೇಂದ್ರ, ಮತ್ತಿತರರು ಉಪಸ್ಥಿತರಿದ್ದರು ಬಂ.ತಾ. ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ
ಬಂಟ್ವಾಳ: ಜೆಸಿಐ ಬಂಟ್ವಾಳಕ್ಕೆ ವಲಯ ೧೫ರ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಜಿ ವೀರಕಂಬದ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಗೆ ೧೦ ಚಾರ್ಟ್ ಪಿನ್ ಬೋರ್ಡನ್ನು ಕೊಡುಗೆಯಾಗಿ ನೀಡಲಾಯಿತು. ಜೆಸಿಐ ಬಂಟ್ವಾಳಕ್ಕೆ ವಲಯಾಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮ Advertisement Advertisement ಜೆಸಿಐ ಬಂಟ್ವಾಳಕ್ಕೆ ವಲಯಾಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮ Advertisement ಬಳಿಕ ಜೆಸಿಐ ಬಂಟ್ವಾಳದ ವತಿಯಿಂದ ವಲಯಾಧ್ಯಕ್ಷರನ್ನು ಗೌರವಿಸಲಾಯಿತು. ಈ ಸಂದರ್ಭ ವಲಯ ಉಪಾಧ್ಯಕ್ಷ ಅಜಿತ್ ಕುಮಾರ್, ವಲಯಾಧ್ಯಕ್ಷರ ಆಪ್ತ ಕಾರ್ಯದರ್ಶಿ ಕಾರ್ತಿಕ್ ಶಾಲಾ ಮುಖ್ಯ ಶಿಕ್ಷಕಿ ಬೇನಾಡಿಕ್ಟ , ಎಸ್ಡಿಎಂಸಿ ಉಪಾಧ್ಯಕ್ಷ ವಿಜಯ, ಜೆಸಿಐ ಬಂಟ್ವಾಳದ ಪೂರ್ವಾಧ್ಯಕ್ಷರಾದ ನಾಗೇಶ್ ಬಾಳೆಹಿತ್ಲು, ಸದಾನಂದ ಬಂಗೇರ, ಲೋಕೇಶ್ ಸುವರ್ಣ, ನಿಕಟ ಪೂರ್ವಧ್ಯಕ್ಷ ರೋಷನ್ ರೈ, ಕಾರ್ಯದರ್ಶಿ ರಶ್ಮಿ ಶೆಟ್ಟಿ ಉಪಾಧ್ಯಕ್ಷ ಕಿಶೋರ್ ಆಚಾರ್ಯ, ಸದಸ್ಯರಾದ ಯೋಗೀಶ್, ರೋಷನ್ ಕಲ್ಲಡ್ಕ, ಕಾರ್ತಿಕ್ ರೈ, ಉಮೇಶ್ ಪೂಜಾರಿ, ಜೆಜೆಸಿ ಅಧ್ಯಕ್ಷ ಜಯರಾಜ್ ಉಪಸ್ಥಿತರಿದ್ದರು.
ಒಡ್ಡೂರು ಫಾರ್ಮ್ಸ್ ನಲ್ಲಿ ಸಿ ಎನ್ ಜಿ ಘಟಕ ಉದ್ಘಾಟನೆ ಬಂಟ್ವಾಳ: ಅನಿಲ ಉತ್ಪಾದನೆ ಕ್ಷೇತ್ರಕ್ಕೆ ಮಾರ್ಕೆಟ್ ನ ಸಮಸ್ಯೆ ಇಲ್ಲ ಆದರೆ ಘಟಕ ಆರಂಭಿಸುವ ಎದೆಗಾರಿಕೆ ಬೇಕು. ಯುವಕರು ಈ ಕ್ಷೇತ್ರದಲ್ಲಿ ಮುಂದೆ ಬರಬೇಕು, . ಯುವಕರು ಇಂತಹ ಶಕ್ತಿ ಉತ್ಪಾದನೆಯನ್ನು ಮಾಡಿದಲ್ಲಿ ಕೇಂದ್ರ ಸರಕಾರ ಸಬ್ಸಿಡಿಯ ಮೂಲಕ ನೆರವು ನೀಡಲಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು. ಒಡ್ಡೂರು ಫಾರ್ಮ್ಸ್ ನಲ್ಲಿ ಸಿ ಎನ್ ಜಿ ಘಟಕ ಉದ್ಘಾಟನೆ Advertisement ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗಂಜಿಮಠದ ಒಡ್ಡೂರು ಫಾರ್ಮ್ ನಲ್ಲಿ ನಿರ್ಮಾಣಗೊಂಡಿರುವ ಒಡ್ಡೂರು ಎನರ್ಜಿ ಎನ್ನುವ ರಾಜ್ಯದ ಮೊದಲ ಸಿಎನ್ ಜಿ ( ಸಂಕುಚಿತ ನೈಸರ್ಗಿಕ ಅನಿಲ) ಘಟಕವನ್ನು ಉದ್ಘಾಟಿಸಿ ಮಾತನಾಡಿದರು.ಎಲ್ಲದರಲ್ಲೂ ಲಾಭ ಗಳಿಸುವ ದೃಷ್ಟಿಕೋನ ಇದ್ದಾಗ ಉದ್ಯಮ ಯಶಸ್ವಿಯಾಗಲು ಸಾಧ್ಯ. ಯಾವುದೇ ವಸ್ತುಗಳನ್ನು ಇತಿಮಿತಿಯಲ್ಲಿ ಬಳಸಿದರೆ ಸಮಸ್ಯೆ ಬರೋದಿಲ್ಲ, ಆದರೆ ಅತಿಯಾದರೆ ಸಮಸ್ಯೆಗಳೂ ಜಾಸ್ತಿಯಾಗುತ್ತದೆ. Advertisement ಪ್ರಧಾನಿ ಮೋದಿ ಗ್ರೀನ್…








