Author: admin

ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಫರಂಗಿಪೇಟೆ ಇದರ ಆಶ್ರಯದಲ್ಲಿ18 ನೇ ವರ್ಷದ ವರಮಹಾಲಕ್ಷ್ಮೀ ವ್ರತಾಚರಣೆ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ವರಮಹಾಲಕ್ಷ್ಮೀ ವ್ರತದ ಸಂಕಲ್ಪ ತೊಟ್ಟು ಪೂಜೆಯಲ್ಲಿ ಪಾಲ್ಗೊಂಡರು.ಪೊಳಲಿ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ಅರ್ಚಕರ ತಂಡ ಪೌರೋಹಿತ್ಯ ವಹಿಸಿದ್ದರು. Advertisement Advertisement ಮನೋಜ್ ತುಪ್ಪೆಕಲ್ಲು ಕವಿತಾ ದಂಪತಿ ಪೂಜಾ ಕಾರ್ಯದಲ್ಲಿ ಭಾಗಿಯಾದರುಸೇವಾರ್ಥಿಗಳಿಗೆ ಪ್ರಸಾದ,ಹಸಿರು ಬಳೆ, ರವಿಕೆ ಕಣ, ದಾರ ಸಹಿತ ಸುವಸ್ತುಗಳನ್ನು ನೀಡಲಾಯಿತು. ಈ ಸಂದರ್ಭ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ, ಜಿ.ಪಂ. ಮಾಜಿ ಸದಸ್ಯ ರವೀಂದ್ರ ಕಂಬಳಿ, ಪ್ರಮುಖರಾದ ಭಾಸ್ಕರ ಚೌಟಪದ್ಮನಾಭ ಕದೆಬೆಟ್ಟು, ದಿನಕರ ಕರ್ಕೆರ, ವಿಕ್ರಂ ಬರ್ಕೆ, ಪ್ರಶಾಂತ್ ತುಂಬೆ, ಸಂಧ್ಯಾ ಜಯರಾಜ್ ತುಪ್ಪೆಕಲ್ಲುಪ್ರಮೀಳಾ ವಿ. ಪೂಂಜ ದೇವಸ್ಯ, ವಿಜಯ ಎನ್. ಶೆಟ್ಟಿ ಸುಜೀರು, ಕಮಲಾಕ್ಷಿ ಕೃಷ್ಣಪ್ಪ ದೋಟ ಮೇರಮಜಲು, ಸುಮಿತ್ರ ಸುರೇಶ್‌ ಕುಂಪಣಮಜಲು, ಅಮಿತಾ ವರದರಾಜ್‌ ಧರ್ಮಗಿರಿ, ಗೀತಾ ಧರ್ಮರಾಜ್ ಮೇರಮಜಲು, ಸುಲೋಚನಾ ಎಸ್.ಶೆಟ್ಟಿ ದೇಮುಂಡೆ ತುಂಬೆ,…

Read More

ಚಂದ್ರಯಾನ 3 ಯಶಸ್ವಿ, ವಿಹಿಂಪ, ಬಜರಂಗದಳದಿಂದ‌ ಸಂಭ್ರಮಾಚರಣೆ ಬಂಟ್ವಾಳ: ಚಂದ್ರಯಾನ 3 ಯಶಸ್ಸಿಗೆ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ ವಿಶ್ವ ಹಿಂದೂ ಪರಿಷದ್, ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬಿ.ಸಿ ರೋಡು ರಕ್ತೇಶ್ವರಿ ದೇವಸ್ಥಾನದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. Advertisement ಚಂದ್ರಯಾನ 3 ಯಶಸ್ವಿ, ವಿಹಿಂಪ, ಬಜರಂಗದಳದಿಂದ‌ ಸಂಭ್ರಮಾಚರಣೆ ಸಾಮೂಹಿಕ ಹನುಮಾನ್ ಚಾಲೀಸ್ ಪಠಣ ಮಾಡಿ ಯಶಸ್ಸಿಗಾಗಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ, ಪ್ರಖಂಡ ಕಾರ್ಯದರ್ಶಿ ದೀಪಕ್ ಅಜೆಕಳ, ಚಂದ್ರ ಕಲಾಯಿ, ಅಶೋಕ್ ಶೆಟ್ಟಿ ಸರಪಾಡಿ, ಪ್ರಣಮ್ ಅಜ್ಜಿಬೆಟ್ಟು, ಕೇಶವ ದೈಪಲ ಮತ್ತಿತರರು ಉಪಸ್ಥಿತರಿದ್ದರು. Advertisement Advertisement

Read More

ಸೆ.17: ಪುಣೆ ಕುಲಾಲ ಸುಧಾರಕ ಸಂಘದ 45ನೇ ವಾರ್ಷಿಕ ಮಹಾಸಭೆ ಬಂಟ್ವಾಳ: ಕುಲಾಲ ಸುಧಾರಕ ಸಂಘ ಪುಣೆ ಇದರ ೪೫ನೇ ವಾರ್ಷಿಕ ಮಹಾಸಭೆಯು ಸೆ. 17ರಂದು ಬೆಳಿಗ್ಗೆ 10 ಗಂಟೆಗೆ ಪುಣೆಯ ಡಾ. ಶಾಮರಾವ್ ಕಲ್ಮಾಡಿ ಕನ್ನಡ ಹೈಸ್ಕೂಲ್ ಸಭಾಭವನದಲ್ಲಿ ನಡೆಯಲಿದೆ. Advertisement Advertisement ಸಂಘದ ಅಧ್ಯಕ್ಷ ಹರೀಶ್ ಕುಲಾಲ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಮಂಗಳೂರು ಕುಲಾಲ ಭವನದ ಆರ್ಥಿಕ ಸಮಿತಿ ಉಪಾಧ್ಯಕ್ಷ ಸುನೀಲ್ ರಾಜು ಸಾಲ್ಯಾನ್, ಆರ್ಯ ಭಟ ಪ್ರಶಸ್ತಿ ವಿಜೇತರಾದ ಪ್ರವೀಣ್ ಶೆಟ್ಟಿ ಪುತ್ತೂರು, ಉದ್ಯಮಿ ದಯಾನಂದ ಸಿ. ಮೂಲ್ಯ, ಮುಂಬೈ ಕುಲಾಲ ಸಂಘದ ಅಧ್ಯಕ್ಷ ರಘು ಎ. ಮೂಲ್ಯ , ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ನಿಕಟಪೂರ್ವಾಧ್ಯಕ್ಷ ನಾರಾಯಣ ಸಿ. ಪೆರ್ನೆ, ಮೊದಲಾದವರು ಭಾಗವಹಿಸಲಿರುವರು.ಮಹಾಸಭೆಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ, ಗೌರವಾರ್ಪಣೆ, ಕುಸಾಲ್ದ ಮಸಾಲೆ ಹಾಸ್ಯ ಪ್ರಹಸನ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ. Advertisement

Read More

ತುಂಬೆ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಜಯಂತಿ ಕೇಶವ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಸಾಲ್ಯಾನ್ ತುಂಬೆ ಅಧಿಕಾರ ಸ್ವೀಕಾರ ಬಂಟ್ವಾಳ: ತುಂಬೆ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಜಯಂತಿ ಕೇಶವ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಸಾಲ್ಯಾನ್ ತುಂಬೆ ಬುಧವಾರ ಅಧಿಕಾರ ಸ್ವೀಕರಿಸಿದರು. ಬಳಿಕ ಪಂಚಾಯತಿ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಪದಗ್ರಹಣ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಿ ಕೊಂಡರು. Advertisement ಈ ಸಂದರ್ಭ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆವರೆಂಡ್ ಫಾಧರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ, ಬಿ.ಎ. ಗ್ರೂಫ್‌ನ ಸಲಾಂ ತುಂಬೆ, ನಿಕಟಪೂರ್ವಾಧ್ಯಕ್ಷ ಪ್ರವೀಣ್ ಬಿ. ತುಂಬೆ, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್. ಗಂಗಾಧರ ಆಳ್ವ, ಪಿಡಿಓ ಚಂದ್ರಾವತಿಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪ್ರಮುಖರಾದ ಸದಾಶಿವ ಡಿ. ತುಂಬೆ, ಸದಸ್ಯ ಮಹಮ್ಮದ್ ವಳವೂರು, ಬಂಟ್ವಾಳ ತಾ.ಪಂ. ಮಾಜಿ ಅಧ್ಯಕ್ಷ ಚಂದ್ರಹಾಸ ಕಕೇರಾ, ಮೋನಪ್ಪ…

Read More

ತುಂಬೆ ಗ್ರಾ.ಪಂ.ನ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಬಿ. ತುಂಬೆ ಅವರಿಗೆ ಅಭಿನಂದನಾ ಸಮಾರಂಭ ಬಂಟ್ವಾಳ: ನಾಗರಿಕ ಅಭಿನಂದನಾ ಸಮಿತಿ ತುಂಬೆ ಇದರ ವತಿಯಿಂದ ತುಂಬೆ ಗ್ರಾ.ಪಂ.ನ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಬಿ. ತುಂಬೆ ಅವರಿಗೆ ಅಭಿನಂದನಾ ಸಮಾರಂಭ ತುಂಬೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಭಾಗವಹಿಸಿ ಮಾತನಾಡಿ ಮನುಷ್ಯನ ಉತ್ತಮ ಗುಣಕ್ಕೆ ಮತ್ಸರ ಪಡಬಾರದು. ಪ್ರವೀಣ್ ತುಂಬೆ ಪಕ್ಷೇತರರಾಗಿ ಸ್ಪರ್ಧಿಸಿ, ಅಧ್ಯಕ್ಷರಾಗಿ ಯಶಸ್ವಿಯಾಗಿ ಅಧಿಕಾರ ನಿಭಾಯಿಸಿ ಗ್ರಾ.ಪಂ.ಗೆ ಒಳ್ಳೆಯ ಹೆಸರು ಬರಲು ಕಾರಣರಾಗಿದ್ದಾರೆ. ಪ್ರತಿ ಕೆಲಸಗಳಿಗೂ ಒತ್ತು ನೀಡಿ ಎಲ್ಲರನ್ನೂ ಸಮಾನ ಭಾವದಿಂದ ಕಂಡು ಜನರ ಸೇವೆ ಮಾಡಿದವರು ಎಂದು ತಿಳಿಸಿದರು. Advertisement ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆ| ಫಾ| ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಪ್ರವೀಣ್ ಬಿ. ತುಂಬೆ ಅವರು ನೇರ ನಡೆ ನುಡಿಯ ವ್ಯಕಿತ್ವದವರಾಗಿದ್ದು ಗ್ರಾಮದ ಸಮಗ್ರ ಅಭಿವೃದ್ದಿಗಾಗಿ ಶ್ರಮಿಸಿದರು. ಅವರ ಅವಧಿಯಲ್ಲಿ ತುಂಬೆ ಗ್ರಾಮ…

Read More

ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ Advertisement ಬಂಟ್ವಾಳ: 2022-23 ನೇ ಸಾಲಿನಲ್ಲಿ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘವು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬ್ಯಾಂಕಿನ ಅಧ್ಯಕ್ಷ ಸುರೇಶ್ ಕುಲಾಲ್ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭೋಜ ಮೂಲ್ಯ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು. Advertisement Advertisement

Read More

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ(ರಿ.) ಪೊಸಳ್ಳಿ ಬಂಟ್ವಾಳ ಇದರ ವತಿಯಿಂದ ಪ್ರತೀ ವರ್ಷದಂತೆ ನಡೆಯುವ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಬಂಟ್ವಾಳ ತಾಲೂಕಿನ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿಭಾಗಗಳಲ್ಲಿ 2023ರಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಭಾವಚಿತ್ರ, ಅಂಕ ಪಟ್ಟಿಯ ಪ್ರತಿ, ಕಲಿಕಾ ಪ್ರಮಾಣ ಪತ್ರ ಮತ್ತು ಆಧಾರ್ ಪ್ರತಿಯೊಂದಿಗೆ ಸಂಘ ಕಚೇರಿಗೆ ಅರ್ಜಿ ಸಲ್ಲಿಸುವುದು. ಹಾಗೆಯೇ 2023 ರಲ್ಲಿ 10ನೇ ತರಗತಿಯಲ್ಲಿ 85% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಕುಲಾಲ ಸಮಾಜದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಪ್ರತಿ ಆಧಾರ್ ಪ್ರತಿ ˌಕಲಿಕಾ ಪ್ರಮಾಣ ಪತ್ರ ಮತ್ತು ಭಾವಚಿತ್ರ ದೊಂದಿಗೆ ಸ್ವ-ವಿವರ ಅರ್ಜಿಯನ್ನು ಅಧ್ಶಕ್ಷರು, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ(ರಿ.), ಪೊಸಳ್ಳಿ, ಬಿ.ಸಿ. ರೋಡು ಬಂಟ್ವಾಳ ತಾಲೂಕು , ದ.ಕ. -574219 ಇಲ್ಲಿಗೆ ತಾ-05-09-2023 ರ ಒಳಗೆ ಕಳುಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. Advertisement Advertisement

Read More

Advertisement ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ, ಮಹಿಳಾ ಘಟಕ ಮತ್ತು ಸೇವಾದಳ ಇದರ ಆಶ್ರಯದಲ್ಲಿ 22 ನೇ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಆ.25 ರಂದು ಶುಕ್ರವಾರ ಸಂಜೆ 4 ಗಂಟೆಗೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. Advertisement Advertisement

Read More

ಬಂಟ್ವಾಳ: ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ಉಚಿತ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಾಣಿ ಕಾರ್ಡ್ ಹಾಗೂ ಸಸಿಗಳ ವಿತರಣಾ ಸಮಾರಂಭ ಆ. 27ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಬಂಟ್ವಾಳ ತಹಶೀಲ್ದಾರ್ ಎಸ್.ಬಿ ಕೂಡಲಗಿ ಉದ್ಘಾಟಿಸುವರು, ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸತೀಶ್ ಅರಳ ಅಧ್ಯಕ್ಷತೆ ವಹಿಸುವರು. ಆ.27: ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದಿಂದ ಉಚಿತ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಾಣಿ ಕಾರ್ಡ್ ಹಾಗೂ ಸಸಿಗಳ ವಿತರಣಾ ಸಮಾರಂಭ Advertisement ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮನೀಶ್ ನಾಯಕ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವರು, ಜಿಲ್ಲಾ ಉದ್ಯೋಗಾಧಿಕಾರಿ ಎಚ್ಚರಪ್ಪ ಬಡಿಗೇರ ಉದ್ಯೋಗ ಕಾರ್ಡ್ ವಿತರಿಸುವರು, ಹಿರಿಯ ತೋಟಗಾರಿಕಾ ಸಹಾಯಕ…

Read More

ಆಟಿ ಆಚರಣೆ ಅಲ್ಲ, ಪ್ರಕೃತಿ ಸಹಜ ಬದುಕು-ಗೋಪಾಲ ಅಂಚನ್ ಬಂಟ್ವಾಳ: ಆಟಿ ಆಚರಣೆಯಲ್ಲ, ಅದು ಪ್ರಕೃತಿ ಸಹಜ ಬದುಕು. ಅಂದಿನ ಬಡತನದ ಬದುಕನ್ನು ಇಂದು ಕೆಲವೆಡೆ ಆಚರಣೆಯ ಹೆಸರಿನಲ್ಲಿ ವೈಭವೀಕರಿಸಲಾಗುತ್ತಿದೆ. ಅಂದಿನ ಆಟಿಯ ಬಡತನದ ಬದುಕಿನ ಹಿಂದಿರುವ ವಾಸ್ತವಾಂಶವನ್ನು ಇಂದಿನ ಜನಾಂಗಕ್ಕೆ ತಿಳಿಯಪಡಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಪ್ರಕೃತಿಯೆಡೆಗೆ ಮುಖ ಮಾಡಿ ಬದುಕಿದರೆ ಮಾತ್ರ ಮಾನವನ ಎಲ್ಲಾ ಸಮಸ್ಯೆಗಳಿಗೂ ಪ್ರಕೃತಿಯಲ್ಲೇ ಪರಿಹಾರ ಇದೆ ಎಂಬ ಸಂದೇಶವನ್ನು ಅಂದಿನ ಆಟಿಯ ಬದುಕು ನಮಗೆ ‌ನೀಡುತ್ತದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಗೋಪಾಲ ಅಂಚನ್ ಹೇಳಿದ್ದಾರೆ. Advertisement ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ನಡೆದ “ಆಟಿದ ನೆನಪು” ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. Advertisement ಅಂದಿನ ಆಟಿ ತಿಂಗಳಲ್ಲಿ ಪ್ರಕೃತಿ ಸಹಜವಾಗಿ ಕಾಡಿದ ಭಯ, ಹಸಿವು ಹಾಗೂ ರೋಗಗಳಿಗೆ ಮಾನವ ಪ್ರಕೃತಿಯಲ್ಲಿಯೇ ಕಂಡು ಹಿಡಿದ ಪರಿಹಾರಗಳೇ ಇಂದು ಆಚರಣೆಯ ಭಾಗಗಳಾಗಿ ರೂಪಾಂತರಗೊಂಡಿದೆ.…

Read More