Author: admin

ನರಹರಿ ಪರ್ವತದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ ಬಂಟ್ವಾಳ: ಪುರಾಣ ಪ್ರಸಿದ್ದ ಪರ್ವತ ಕ್ಷೇತ್ರ ಬಂಟ್ವಾಳ ತಾಲೂಕಿನ ನರಹರಿ ಪರ್ವತದ ಮೇಲಿರುವ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ತೀರ್ಥ ಸೋಮವಾರ ಸ್ನಾನ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಹತ್ತಿ ದೇವಸ್ಥಾನದ ತೀರ್ಥ ಬಾವಿಗಳಾದ ಶಂಖ, ಚಕ್ರ, ಗಧಾ, ಪದ್ಮ ಕೆರೆಗಳಲ್ಲಿ ತೀರ್ಥಸ್ನಾನ ಮಾಡಿ ಪುನೀತರಾದರು. ದೇವರ ದರ್ಶನ ಪಡೆದು ಉರಿ ಹಗ್ಗ ಸೇವೆ ಸಹಿತ ವಿವಿಧ ವಿಶೇಷ ಸೇವೆಗಳನ್ನು ಸಲ್ಲಿಸಿದರು. ನರಹರಿ ಪರ್ವತದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲಡ್ಕ ಮದ್ಯ ಭಾಗದಲ್ಲಿ ಅಮ್ಟೂರು, ಗೋಳ್ತಮಜಲು ಪಾಣೆಮಂಗಳೂರು ಈ ಮೂರು ಗ್ರಾಮಗಳ ತ್ರಿವೇಣಿ ಸಂಗಮದಂತೆ ದಟ್ಟವಾದ ಕಾಡಿನ ಮಧ್ಯದಲ್ಲಿ ಮಹಾಶಿವಲಿಂಗದಂತೆ ಕಂಗೊಳಿಸುತ್ತಿರುವ ಪುಣ್ಯ ಕ್ಷೇತ್ರವೇ ಶ್ರೀ ನರಹರಿ ಪರ್ವತ. ದ್ವಾಪರ ಯುಗದಲ್ಲಿ ಕುರುಕ್ಷೇತ್ರ ಯುದ್ಧದ ಬಳಿಕ ಪಾಂಡವರು ತಮ್ಮ ಪಾಪ ವಿಮೋಚನೆಗಾಗಿ ಎಲ್ಲಾ ತೀರ್ಥ ಕ್ಷೇತ್ರಗಳನ್ನು ಸಂದರ್ಶಿಸುತ್ತ ದಕ್ಷಿಣ…

Read More

ತುಳುಕೂಟದ ವತಿಯಿಂದ ಪಾಲೆ ಕೆತ್ತೆ ಕಷಾಯ ವಿತರಣೆ ಬಂಟ್ವಾಳ: ತುಳುನಾಡಿನ‌‌ ಸಂಪ್ರದಾಯದ ಆಚರಣೆಯಲ್ಲಿ ಆರೋಗ್ಯದ ಭಾಗ್ಯವೂ ಇದೆ ಎಂದು ತುಳುಕೂಟ ಬಂಟ್ವಾಳ ಇದರ ಅಧ್ಯಕ್ಷ ಸುದರ್ಶನ್ ಜೈನ್ ಹೇಳಿದರು‌‌. Advertisement ಅವರು ತುಳುಕೂಟ ಬಂಟ್ವಾಳದ ಆಶ್ರಯದಲ್ಲಿ ಶ್ರೀ ರಕ್ತೇಶ್ವರಿ ದೇವಸ್ಥಾನ ಬಿ.ಸಿ.ರೋಡ್ ಇದರ ಆಡಳಿತ ಮಂಡಳಿಯ ಸಹಕಾರದಲ್ಲಿ ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ಆಟಿ ಅಮವಾಸ್ಯೆಯ ಪ್ರಯುಕ್ತ ನಡೆದ ಸಾರ್ವಜನಿಕ ಪಾಲೆಯ ಕೆತ್ತೆ ಕಷಾಯ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ಸಾರ್ವಜನಿಕರಿಗೆ ಕಷಾಯ ನೀಡಿ ಆಟಿ ಅಮಾವಾಸ್ಯೆಯ ಶುಭಾಶಯ ಕೋರಿದರು. ತುಳುಕೂಟದ ವತಿಯಿಂದ ಪಾಲೆ ಕೆತ್ತೆ ಕಷಾಯ ವಿತರಣೆ Advertisement ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಎನ್. ಶಿವಶಂಕರ್, ಮಾಜಿ ಅಧ್ಯಕ್ಷ ರಾಜೇಶ್.ಎಲ್.ನಾಯಕ್, ತುಳುಕೂಟದ ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್, ಹಿರಿಯರಾದ ಕಾಂತಾಡಿ ಸೀತಾರಾಮ ಶೆಟ್ಟಿ, ಪರಮೇಶ್ವರ ಮೂಲ್ಯ, ನಾರಾಯಣ ಸಿ. ಪೆರ್ನೆ, ಸದಾಶಿವ ಪುತ್ರನ್, ಟಿ. ಶೇಷಪ್ಪ ಮಾಸ್ಟರ್, ಸುಕುಮಾರ್ ಬಂಟ್ವಾಳ್, ದಾಮೋದರ ಮಾಸ್ಟರ್ ಏರ್ಯ, ನಿತೇಶ್…

Read More

ಸಜೀಪಮೂಡದಲ್ಲಿ ಪಿಎಂ ಕೃಷಿ ಸಿಂಚಯಿ ಯೋಜನೆಯಡಿ ಅಮೃತ ಮಾರಾಟ ಮಳಿಗೆ ಉದ್ಘಾಟನೆ ಬಂಟ್ವಾಳ: ಸಜಿಪಮೂಡ ಗ್ರಾಮದ ಸುಭಾಷ್ ನಗರದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೃಷಿ ಉತ್ಪನ್ನಗಳ ಮಾರಾಟ, ರೈತ ಮಹಿಳೆಯರ ಸ್ವ ಉದ್ಯೋಗಕ್ಕಾಗಿ ಅಮೃತ ಮಾರಾಟ ಮಳಿಗೆಯನ್ನು ಶಾಸಕ ರಾಜೇಶ್ ನಾಯ್ಕ್ ಶನುವಾರ ಉದ್ಘಾಟಿಸಿದರು.ಅಮೃತ್ ಸ್ಟಾಲ್ ಮಾರಾಟ ಮಳಿಗೆಯನ್ನು ಸಜಿಪಮೂಡ ಜಲಾನಯನ ಸಮಿತಿಯ ಅಕ್ಷಯ ಸ್ವಸಹಾಯ ಸಂಘದ ಸದಸ್ಯರಿಗೆ ಜೀವನೋಪಾಯ ಚಟುವಟಿಕೆ ಘಟಕದಡಿ ಜಲಾನಯನ ವ್ಯಾಪ್ತಿಯಲ್ಲಿ ವ್ಯಾಪಾರ ವಹಿವಾಟು ನಡೆಸಿ ಸ್ವಾವಲಂಬನೆ ಹೊಂದಲು ಕೃಷಿ ಇಲಾಖೆ ಜಲಾನಯನ ವಿಭಾಗದಿಂದ ನೀಡಿದ ಸೌಲಭ್ಯವಾಗಿರುತ್ತದೆ. ಸಜೀಪಮೂಡದಲ್ಲಿ ಪಿಎಂ ಕೃಷಿ ಸಿಂಚಯಿ ಯೋಜನೆಯಡಿ ಅಮೃತ ಮಾರಾಟ ಮಳಿಗೆ ಉದ್ಘಾಟನೆ ಸಜೀಪಮೂಡದಲ್ಲಿ ಪಿಎಂ ಕೃಷಿ ಸಿಂಚಯಿ ಯೋಜನೆಯಡಿ ಅಮೃತ ಮಾರಾಟ ಮಳಿಗೆ ಉದ್ಘಾಟನೆ Advertisement ಬೇಕರಿ ಉತ್ಪನ್ನಗಳ ಮಾರಾಟಕ್ಕೆಂದು ಸ್ವಸಹಾಯ ಸಂಘಕ್ಕೆ ನೀಡಿದ ಅಮೃತ್‌ ಮಳಿಗೆಗೆ ಇಲಾಖೆಯಿಂದ ರೂ. 56 ಸಾವಿರ ರೂಪಾಯಿ ಸಹಾಯಧನ ನೀಡಲಾಗಿದೆ. ಈ ಸಂದಭದಲ್ಲಿ ದ.ಕ. ಜಿಲ್ಲೆ ಜಂಟಿ ಕೃಷಿ…

Read More

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ ಇದರ ೪೪ನೇ ವಾರ್ಷಿಕ ಮಹಾಸಭೆ ಜುಲೈ 23ರಂದು ಭಾನುವಾರ ಬೆಳಿಗ್ಗೆ ಗಂಟೆ 11ಕ್ಕೆ ಅಧ್ಯಕ್ಷ ನಾರಾಯಣ್ ಸಿ. ಪೆರ್ನೆಯವರ ಅಧ್ಯಕ್ಷತೆಯಲ್ಲಿ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.ಮಧ್ಯಾಹ್ನ 3.30ಕ್ಕೆ ನಡೆಯುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕುಲಾಲರ ಮಾತ್ರ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಬೆಳ್ತಂಗಡಿ ತಾಲೂಕು ಕುಲಾಲ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಸೋಮಯ ಮೂಲ್ಯ ಹನೈನಡೆ, ಉದ್ಯಮಿ ದಿವಾಕರ ಬಂಗೇರ, ಬಂಟ್ವಾಳ ತಾಲೂಕು ಕುಲಾಲ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಬಿ. ನಾವೂರ ಭಾಗವಹಿಸಲಿದ್ದಾರೆ. Advertisement Advertisement ಪ್ರಶಸ್ತಿ ಪುರಸ್ಕಾರ :ಬಂಟ್ವಾಳ ಕುಲಾಲ ಸಂಘದ ಸ್ಫಾಪನೆಯಲ್ಲಿ ಸಹಕರಿಸಿದ ಗೋಪಾಲ ಸಾಲ್ಯಾನ್ ರವರಿಗೆ ಅಮೂಲ್ಯ ರತ್ನ ಪ್ರಶಸ್ತಿ, ಕಟೀಲು ಮೇಳದ ಕಲಾವಿದ ಯಕ್ಷಗುರು ಅಶ್ವಥ್ ಕುಲಾಲ್ ಮಂಜನಾಡಿ ಮತ್ತು ಡ್ಯಾನ್ಸ್ ಕೋರಿಯೋಗ್ರಾಫರ್ ಮಹೇಶ್ ಕುಲಾಲ್ ಕಡೇಶಿವಾಲಯ ಇವರಿಗೆ ಕುಲಾಲ ರತ್ನ ಪ್ರಶಸ್ತಿ ಹಾಗೂ ಎಗ್ರಿಕಲ್ಚರಲ್ ಬಿಎಸ್ಸಿಯಲ್ಲಿ 39…

Read More

ಬಂಟ್ವಾಳ: ಹಿಂದುಳಿದ ಜಾತಿ ಸಮುದಾಯಕ್ಕೂ ಐಎಎಸ್. ಐಪಿಎಸ್ ಮತ್ತು ಕೆಎಎಸ್ ಉಚಿತ ತರಬೇತಿ ಅವಕಾಶ ನೀಡುವಂತೆ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ, ನಿ. ಅಧ್ಯಕ್ಷ ಪ್ರಭಾಕರ ಪ್ರಭು ಮುಖ್ಯಮಂತ್ರಿಯವರನ್ನು ಪತ್ರದ ಮೂಲಕ ಆಗ್ರಹಿಸಿದಾರೆ. Advertisement 2023-24ನೇ ಸಾಲಿನಲ್ಲಿ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಅಲ್ಪಸಂಖ್ಯಾತ ಜಾತಿಗೆ ಸೇರಿದ ಮುಸ್ಲಿಂ ರಿಗೆ ಐಎಎಸ್, ಐಪಿಎಸ್, ಕೆಎಎಸ್, ಮುಂತಾದ ಪದವಿ ಪಡೆಯಲು ಉಚಿತ ವಸತಿ ಸಹಿತ ಉಚಿತ ತರಬೇತಿ ನೀಡುವ ಬಗ್ಗೆ ಉಲ್ಲೇಖ ಮಾಡಿರುತ್ತೀರಿ.ಆದರೆ ಕರ್ನಾಟಕದಲ್ಲಿ ಶೇ.40 ರಷ್ಟು ಜನ ಹಿಂದುಳಿದ ವರ್ಗಗಳ ಜಾತಿಗೆ ಸೇರಿದವರಾಗಿದ್ದು ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುವ ಬಗ್ಗೆ ಯಾವುದೇ ವಿಷಯ ಪ್ರಕಟಿಸಿವುದಿಲ್ಲವಾದ್ದರಿಂದ ಹಿಂದುಳಿದ ವರ್ಗದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. Advertisement ಆದುದರಿಂದ ಅಲ್ಪಸಂಖ್ಯಾತ ಮುಸ್ಲಿಂ ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್, ಮತ್ತು ಕೆಎಎಸ್ ಪದವಿ ಪಡೆಯಲು ನೀಡುವ ಉಚಿತ ವಸತಿ ಸಮೇತ ತರಬೇತಿಯನ್ನು ರಾಜ್ಯದ ಇತರೇ ಹಿಂದುಳಿದ ವರ್ಗದವರಿಗೂ ವಿಸ್ತರಣೆ ಮಾಡುವಂತೆ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.

Read More

ಲಯನ್ಸ್ ಕ್ಲಬ್ ಬಂಟ್ವಾಳ 2023-24 ನೇ ಸಾಲಿನ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಂಟ್ಚಾಳ: ಲಯನ್ಸ್ ಕ್ಲಬ್ ಬಂಟ್ವಾಳ ಇದರ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.ಪದಗ್ರಹಣ ಅಧಿಕಾರಿ ಪೂರ್ವ ಜಿಲ್ಲಾ ಗವರ್ನರ್ ಡಾ. ಗೀತ್ ಪ್ರಕಾಶ್ ಮಾತನಾಡಿ ಪರೋಪಕಾರ ಕಾಟಚಾರವಾಗದೆ ನಿಜಾರ್ಥದ ಸೇವೆಯನ್ನು ನೀಡಬೇಕು. ನಾವು ಮಾಡುವ ಉತ್ತಮ ಕಾರ್ಯಗಳಿಂದ ನಮ್ಮ ಜೀವಿತಾವಧಿಯಲ್ಲಿಯೇ ಸ್ವರ್ಗ ವನ್ನು ಸೃಷ್ಟಿಸಲು ಸಾಧ್ಯವಿದೆ‌ ಅಂತಹ ಸೇವಾ ಕಾರ್ಯವನ್ನು ಲಯನ್ಸ್ ಕ್ಲಬ್ ಮಾಡುತ್ತಿದ್ದು ಲಯನ್ಸ್ ಕ್ಲಬ್ ನ ಸದಸ್ಯರು ಭಾಗ್ಯವಂತರು ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕುದ್ರೋಳಿ ಗೋಕರ್ಣ ಕ್ಷೇತ್ರದ ಕೋಶಾಧಿಕಾರಿ, ನ್ಯಾಯವಾದಿ ಪದ್ಮರಾಜ್ ಆರ್. ಮಾತನಾಡಿ ಲಯನ್ಸ್ ಶಿಸ್ತು ಬದ್ದ ಹಾಗೂ ಸ್ವಾರ್ಥ ರಹಿತ ಸೇವೆಯನ್ನು ನೀಡುವ ಸಂಸ್ಥೆಯಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವ ಹಾಗೂ ಪ್ರೋತ್ಸಾಹ ನೀಡುವ ಕಾರ್ಯ ಲಯನ್ಸ್ ಕ್ಲಬ್ ನಿಂದ ಆಗಬೇಕಾಗಿದೆ. ಸರಕಾರದ ಯೋಜನೆಗಳನ್ನು ಅರ್ಹ ಜನರಿಗೆ ಮುಟ್ಟಿಸುವ…

Read More

ವಾಮದಪದವು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಬಂಟ್ವಾಳ: ಸರ್ಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಅವರು ವಿದ್ಯಾರ್ಥಿ ಸಂಘ ಉದ್ಘಾಟಿಸಿದರು. ವಾಮದಪದವು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ Advertisement ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಶ್ರೀಧರ್ ಎಚ್. ಜಿ. ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನವನ್ನು ಬೋಧಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೇಶದ ಸಂವಿಧಾನದ ಮಹತ್ವವನ್ನು ವಿವರಿಸುತ್ತಾ ಕಾಲೇಜಿನ ನೀತಿ ನಿಯಮಗಳನ್ನು ಪಾಲಿಸುವ ಅವಶ್ಯಕತೆಯನ್ನು ತಿಳಿ ಹೇಳಿದರು.ಸರಕಾರಿ ಪದವಿ ಪೂರ್ವ ಕಾಲೇಜು, ಸಿದ್ಧಕಟ್ಟೆಯ ರಾಜ್ಯ ಶಾಸ್ತ್ರ ಉಪನ್ಯಾಸಕ ಶೀನಪ್ಪ ಎನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿ ಸಂಸತ್ ನ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳಲ್ಲಿ ಇರಬೇಕಾದ ಪ್ರಾಮಾಣಿಕತೆ, ಪ್ರಯತ್ನ ಶೀಲತೆ ಹಾಗೂ ಬಾಳಿಗೊಂದು ಗುರಿ ಇರಬೇಕಾದ ಅಗತ್ಯತೆಯನ್ನು ವಿವರಿಸಿದರು. ವಾಮದಪದವು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ…

Read More

ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ ಬಂಟ್ವಾಳ: ಇಲ್ಲಿನ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಬಿ. ಸಿ ರೋಡಿನ ಆಡಳಿತ ಸೌಧದ ಮುಂಭಾಗದಲ್ಲಿ ಬುಧವಾರ ಮೌನ ಪ್ರತಿಭಟನೆ ನಡೆಯಿತು. Advertisement ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ ಪ್ರತಿಭಟನೆಯ ಬಳಿಕ ಸುದ್ದಿಗಾರರರೊಂದಿಗೆ ರಮಾನಾಥ ರೈ ಮಾತನಾಡಿ ಲೋಕಸಭಾ ಸದಸ್ಯರಾಗಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ ರಾಹುಲ್ ಗಾಂಧಿಯವಬರ ಸದಸ್ಯತ್ವವನ್ನು ಅನರ್ಹಗೊಳಿಸಿ ಲೋಕಸಭೆಯಲ್ಲಿ ಪ್ರತಿಪಕ್ಷದ ಧ್ವನಿಯಾಗಿ ಮಾತನಾಡುವ ಅವಕಾಶವನ್ನು ನಿರಾಕರಿಸಲಾಗಿದೆ, ಪ್ರಧಾನಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಜನರಿಗೆ ತಪ್ಪಾಗಿ ಅರ್ಥೆಸಿ, ಬಿಜೆಪಿಯ ಕುಮ್ಮಕ್ಕಿನಂತೆ ಪಿತೂರಿಯ ಭಾಗವಾಗಿ ಅವರ ಲೋಕಸಭಾ ಸದಸದ್ಯತ್ವವನ್ನು ಅನರ್ಹಗೊಳಿಸಲಾಗಿದೆ ಎಂದು ಆರೋಪಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಹಿತ ಅನೇಕ ಕಾಂಗ್ರೆಸ್ ಮುಖಂಡರ…

Read More

ಸಜೀಪಮೂಡ : ಸರಕಾರಿ ಪ್ರೌಢಶಾಲೆಯಲ್ಲಿ ಜ್ಞಾನಜ್ಯೋತಿ ರಂಗಮಂದಿರ ಉದ್ಘಾಟನೆ ಬಂಟ್ವಾಳ: ಜೆಸಿಐ ಬಂಟ್ವಾಳದ ನೇತೃತ್ವದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳು, ಎಸ್‌ಡಿಎಂಸಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಹಕಾರದಲ್ಲಿ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಗೆ ನಿರ್ಮಾಣಗೊಂಡ ಜ್ಞಾನ ಜ್ಯೋತಿ ರಂಗಮಂದಿರವನ್ನು ಜೆಸಿಐನ ರಾಷ್ಟ್ರೀಯ ಅಧ್ಯಕ್ಷ ಕಾರ್ತಿಕೇಯನ್ ಮಂಗಳವಾರ ಉದ್ಘಾಟಿಸಿ ಶಾಲೆಗೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಅವರು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ರಂಗ ಮಂದಿರ ಅತ್ಯಂತ ಅಗತ್ಯವಾಗಿದ್ದು ಜೆಸಿಐ ಬಂಟ್ವಾಳ ಇದನ್ನು ಶಾಲೆಗೆ ಒದಗಿಸಿಕೊಟ್ಟಿರುವುದು ಶ್ಲಾಘನೀಯ ಎಂದರು. ವಲಯ ೧೫ರ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಶುಭ ಕೋರಿದರು. ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಅಧ್ಯಕ್ಷತೆ ವಹಿಸಿದ್ದರು. ಜೆಸಿಐನ ರಾಷ್ಟ್ರೀಯ ಅಧ್ಯಕ್ಷ ಕಾರ್ತಿಕೇಯನ್ ಅವರನ್ನು ಘಟಕಕ್ಕೆ ಅಧಿಕೃತ ಭೇಟಿ ನೀಡಿದ ಹಿನ್ನಲೆಯಲ್ಲಿ ಅವರ್‍ನು ಸನ್ಮಾನಿಸಲಾಯಿತು. ರಂಗ ಮಂದಿರ ನಿರ್ಮಾಣಕ್ಕೆ ಸಹಕರಿಸಿದ ಲೋಕೇಶ್ ಸುವರ್ಣ, ಯತೀಶ್ ಕರ್ಕೆರಾ, ಅಶ್ವಿನ್ ಮುಂಡಾಜೆ ಅವರನ್ನು ಗೌರವಿಸಲಾಯಿತು. Advertisement Advertisement ಮುಖ್ಯ ಅತಿಥಿಗಳಾಗಿ ವಲಯ ಉಪಾಧ್ಯಕ್ಷ ಅಜಿತ್…

Read More

ರೊಟರಿ ಕ್ಲಬ್ ಬಂಟ್ವಾಳದ 2023-24 ನೇ ಸಾಲಿನ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ 2023-24 ನೇ ಸಾಲಿನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರೋಟರಿ ಬಿ.ಎ. ಸೋಮಯಾಜಿ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆಯಿತು.ನಿರ್ಗಮನ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮಾತನಾಡಿ ಕ್ಲಬ್ ಅತ್ಯುತ್ತಮ‌ ಸೇವೆ ಮಾಡಿ ಪ್ಲಾಟಿನಂ ಪ್ಲಸ್ ಪ್ರಶಸ್ತಿ ಪಡೆಯಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ರೊಟರಿ ಕ್ಲಬ್ ಬಂಟ್ವಾಳದ 2023-24 ನೇ ಸಾಲಿನ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆನ್ಸ್ ಅಧ್ಯಕ್ಷೆ ಪ್ರೇಮರಾವ್ ಅನಿಸಿಕೆ ವ್ಯಕ್ತಪಡಿಸಿದರು.ನೂತನ ಅಧ್ಯಕ್ಷರಾಗಿ ಪ್ರಕಾಶ್ ಬಾಳಿಗ, ಕಾರ್ಯದರ್ಶಿಯಾಗಿ ಸದಾಶಿವ ಬಾಳಿಗ ಮತ್ತಿತರ ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸಿದರು.ನೂತನ ಅಧ್ಯಕ್ಷ ಪ್ರಕಾಶ್ ಬಾಳಿಗ ಮಾತನಾಡಿ 54 ವರ್ಷಗಳ ಇತಿಹಾಸ ಹೊಂದಿರುವ ರೋಟರಿ ಕ್ಲಬ್ ಬಂಟ್ವಾಳ ಸಮಾಜ ಮುಖಿ ಸೇವಾ ಕಾರ್ಯಗಳನ್ನು ನಡೆಸುವ ಮೂಲಕ ಗುರುತಿಸಿಕೊಂಡಿದ್ದು ಪ್ರಸ್ತುತ ಸಾಲಿನಲ್ಲೂ ಸೇವಾ ಕಾರ್ಯ ಮಾಡಲು ಸಹಕಾರ ನೀಡುವಂತೆ ವಿನಂತಿಸಿಕೊಂಡರು. Advertisement ಕಾರ್ಯಕ್ರಮದಲ್ಲಿ…

Read More