Author: admin

ಫ್ಲೈ ಓವರ್ ಮೇಲಿಂದ ಚಿಮ್ಮುತ್ತಿದ್ದ ನೀರಿನ ಸಮಸ್ಯೆಗೆ ಮುಕ್ತಿ, ಮಳೆಯಲ್ಲಿಯೇ ಶ್ರಮದಾನ ನಡೆಸಿದ ಜೆಸಿಐ ಬಂಟ್ವಾಳದ ಸದಸ್ಯರು ಬಂಟ್ವಾಳ: ವಾಹನಗಳ ಸಂಚಾರದ ವೇಳೆ ಬಿ.ಸಿ.ರೋಡಿನ ಮೇಲ್ಸೆತುವೆಯ ಮೇಲಿಂದ ಏಕಾಏಕಿ ಚಿಮ್ಮಿತ್ತಿದ್ದ ನೀರಿನ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಜೆಸಿಐ ಬಂಟ್ವಾಳದ ಸದಸ್ಯರು ಶನಿವಾರ ಮಧ್ಯಾಹ್ನದ ವೇಳೆಗೆ ಶ್ರಮದಾನ ನಡೆಸಿ, ಫ್ಲೈ ಓವರ್‌ನ ರಂಧ್ರಗಳಲ್ಲಿ ತುಂಬಿ ಕೊಂಡಿದ್ದ ಪ್ಲಾಸ್ಟಿಕ್ ಹಾಗೂ ಹೂಳನ್ನು ತೆರವುಗೊಳಿಸಿ ಅಲ್ಲಿ ಕೆರೆಯಂತೆ ಸಂಗ್ರಹಗೊಳ್ಳುತ್ತಿದ್ದ ನೀರನ್ನು ಸರಾಗವಾಗಿ ಹರಿದು ಹೋಗಲು ಅನುವು ಮಾಡಿಕೊಟ್ಟರು. ಫ್ಲೈ ಓವರ್ ಮೇಲಿಂದ ಚಿಮ್ಮುತ್ತಿದ್ದ ನೀರಿನ ಸಮಸ್ಯೆಗೆ ಮುಕ್ತಿ, ಮಳೆಯಲ್ಲಿಯೇ ಶ್ರಮದಾನ ನಡೆಸಿದ ಜೆಸಿಐ ಬಂಟ್ವಾಳದ ಸದಸ್ಯರು ಕಳೆದ ಹಲವು ದಿನಗಳಿಂದ ಬಿ.ಸಿ.ರೋಡಿನ ಹೃದಯ ಭಾಗದಲ್ಲಿ ಮೇಲ್ಸೆತುವೆಯ ಮೇಲೆ ನೀರು ಸಂಗ್ರಹಗೊಂಡು ವಾಹನಗಳು ರಭಸವಾಗಿ ಚಲಿಸುವ ವೇಳೆ ಅದು ಚಿಮ್ಮಿ ಕೆಳಭಾಗದಲ್ಲಿ ನಡೆದುಕೊಡು ಹೋಗುವ, ರಸ್ತೆದಾಟುವ ಪಾದಾಚಾರಿಗಳು, ದ್ವಿಚಕ್ರ ವಾಹನ ಸವಾರರ ಮೇಲೆ ಬಿದ್ದು ಮೈಯಿಡೀ ಒದ್ದೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಈ ಅವ್ಯವಸ್ಥೆಯ ವಿರುದ್ದ…

Read More

ಜು.8 ರೋಟರಿ ಕ್ಲಬ್ ಬಂಟ್ವಾಳದ 2023-24 ನೇ ಸಾಲಿನ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು. 8ರಂದು ಸಂಜೆ 6.30ಕ್ಕೆ ರೋಟರಿ ಬಿ.ಎ.ಸೋಮಯಾಜಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ತಿಳಿಸಿದರು.ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. Advertisement Advertisement ಪೂರ್ವ ಗವರ್ನರ್ ಕೆ. ಕೃಷ್ಣ ಶೆಟ್ಟಿ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸುವರು, ಮುಖ್ಯ ಅತಿಥಿಗಳಾಗಿ ಸಹಾಯಕ ಗವರ್ನರ್ ಲಾರೆನ್ಸ್ ಗೋಂಸಾಲ್ವ್‌ಸ್, ವಲಯ ಲೆಫ್ಟಿನೆಂಟ್ ರವೀಂದ್ರ ದರ್ಬೆ, ಉದ್ಯಮಿ ಸುಬ್ರಾಯ ಎಂ. ಪೈ ಭಾಗವಹಿಸುವರು ಎಂದು ತಿಳಿಸಿದರು. 54 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ರೋಟರಿ ಕ್ಲಬ್ ಬಂಟ್ವಾಳದ ಸದಸ್ಯ ಪ್ರಕಾಶ್ ಕಾರಂತ್ ಅವರು ಜಿಲ್ಲಾ ಗವರ್ನರ್ ಆಗಿರುವುದು ನಮ್ಮ ಕ್ಲಬ್ಬಿಗೆ ಹೆಮ್ಮೆಯ ಸಂಗತಿಯಾಗಿದೆ. ಸೂರಿಲ್ಲದವರಿಗೆ ಮನೆ ನಿರ್ಮಾಣ, ವಿದ್ಯುತ್ ಸಂಪರ್ಕ ಇಲ್ಲದ ಒಂದು ಗ್ರಾಮಕ್ಕೆ ವಿದ್ಯುದೀಕರಣ, ಆರೋಗ್ಯ…

Read More

ಭದ್ರಾ ಇನ್ ಆಂಡ್ ಔಟ್ ಸ್ಟೋರ್‌ನ ನೂತನ ಮಳಿಗೆ ಶುಭಾರಂಭ ಬಂಟ್ವಾಳ: ತಾಲೂಕಿನಾದ್ಯಂತ ಮನೆಮಾತಾಗಿರುವ ಭದ್ರ ಹೋಮ್ ಅಪ್ಲೈಯನ್ಸಸ್ ಪ್ರಸ್ತುತ ಪಡಿಸುವ ಭದ್ರಾ ಇನ್ ಆಂಡ್ ಔಟ್ ಸ್ಟೋರ್‌ನ ನೂತನ ಮಳಿಗೆ ಬಂಟ್ವಾಳದ ಬಸ್ತಪಡ್ಪುವಿನಲ್ಲಿ ಶುಭಾರಂಭಗೊಂಡಿತು. ಬಂಟ್ವಾಳದ ಜನತೆಗೆ ಮತ್ತೊಂದು ಸುಭದ್ರ ಭರವಸೆಯ ಆಯ್ಕೆ ಎನ್ನುವಂತೆ ಭಾರತ್‌ಪೆಟೋಲಿಯಂನ ಸಹಯೋಗದಲ್ಲಿ ಭದ್ರಾ ಇನ್ ಆಂಡ್ ಔಟ್ ಸ್ಟೋರ್ ಬಂಟ್ವಾಳದಲ್ಲಿ ಕಾರ್ಯರಂಭಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಔಟ್‌ಲೆಟ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಭದ್ರಾ ಇನ್ ಆಂಡ್ ಔಟ್ ಸ್ಟೋರ್‌ನ ನೂತನ ಮಳಿಗೆ ಶುಭಾರಂಭ ಭದ್ರಾ ಇನ್ ಆಂಡ್ ಔಟ್ ಸ್ಟೋರ್‌ನ ನೂತನ ಮಳಿಗೆ ಶುಭಾರಂಭ ರೋಟರಿ ಕ್ಲಬ್‌ನ ಜಿಲ್ಲಾ ನಿಕಟಪೂರ್ವ ಗವರ್ನರ್ ಪ್ರಕಾಶ್ ಕಾರಂತ್ ನೂತನ ಮಳಿಗೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದ ಭದ್ರ ಗ್ಯಾಸ್ ಏಜೆನ್ಸಿ ಸಂಸ್ಥೆಯ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿರುವ ಮಂಜುನಾಥ ಆಚಾರ್ಯ ವಿಶೇಷ ಮುತುವರ್ಜಿಯಿಂದ ಭಾರತ್ ಪೆಟ್ರೋಲಿಯಂ ಸಹಯೋಗದೊಂದಿಗೆ ಹೊಸ ಸೂಪರ್ ಮಾರ್ಕೆಟ್…

Read More

ಬಂಟ್ವಾಳ : ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಇದರ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಲೊರೆಟ್ಟೊ ಹಿಲ್ಸ್ ನ ಸಭಾಂಗಣದಲ್ಲಿ ನಡೆಯಿತು.ಪದಗ್ರಹಣ ಅಧಿಕಾರಿ ಪೂರ್ವ ಜಿಲ್ಲಾ ಗವರ್ನರ್ ರಂಗನಾಥ ಭಟ್ ಮಾತನಾಡಿ, ಸಾಮಾಜಿಕ ಸೇವೆ ಮಾಡಲು ರೋಟರಿ ಕ್ಲಬ್ ಪೂರಕವಾಗಿದೆ. ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಅತ್ಯಂತ ಕಡಿಮೆ ಅವಽಯಲ್ಲಿ ದೊಡ್ಡ ಸಾಧನೆ ಮಾಡಿದೆ ಎಂದು ಹೇಳಿ ಪ್ರಶಂಸೆ ವ್ಯಕ್ತಪಡಿಸಿದರು.ಮುಖ್ಯ ಅತಿಥಿಯಾಗಿದ್ದ ನಿಕಟಪೂರ್ವ ಗವರ್ನರ್ ಪ್ರಕಾಶ್ ಕಾರಂತ್ ಮಾತನಾಡಿ, ರೋಟರಿ ಕ್ಲಬ್ ಲೊರಟ್ಟೊ ಹಿಲ್ಸ್ ವಿಶಿಷ್ಠವಾದ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಗುರುತಿಸಿಕೊಂಡಿದ್ದು ಜಿಲ್ಲೆಯಲ್ಲಿ ಅಮೋಘ ಕ್ಲಬ್ ಆಗಿ ಮೂಡಿ ಬರಲಿದೆ ಎಂದರು. ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್: ನೂತನ ಪದಾಧಿಕಾರಿಗಳ ಪದಗ್ರಹಣ ನಿರ್ಗಮನ ಅಧ್ಯಕ್ಷೆ ಶ್ರುತಿ ಮಾಡ್ತಾ ಅವರು ಮಾತನಾಡಿ, ತನ್ನ ಅವಽಯಲ್ಲಿ ಕ್ಲಬ್ ವಿಶೇಷ ಸೇವಾ ಚಟುವಟಿಕೆಯನ್ನು ಮಾಡಿದ ಹಿನ್ನೆಲೆಯಲ್ಲಿ ಪ್ಲಾಟಿನಂ ಪ್ಲಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ ಎಂದರು. Advertisement ನೂತನ ಅಧ್ಯಕ್ಷರಾಗಿ ಸಂಘಟಕ ರಾಮಚಂದ್ರ ಶೆಟ್ಟಿಗಾರ್,…

Read More

ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ಉದ್ಘಾಟನಾ ಸಮಾರಂಭ ಬಂಟ್ವಾಳ: ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ಉದ್ಘಾಟನಾ ಸಮಾರಂಭ ಮಂಗಳವಾರ ಸಂಜೆ ಲೊರೆಟ್ಟೋ ಪದವಿನಲ್ಲಿರುವ ಲೊರೆಟ್ಟೋ ಮಾತಾ ಸಭಾಂಗಣದಲ್ಲಿ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ಅಧ್ಯಕ್ಷ ರಾಜಗೋಪಾಲ ರೈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ ಕ್ಯಾಟರಿಂಗ್ ವೃತ್ತಿನಿರತರು ಸಂಘಟಿತರಾದಾಗ ಕಷ್ಟ ಸಂದರ್ಭವನ್ನು ಎದರಿಸಲು ಸಾಧ್ಯವಿದೆ ಎಂದು ತಿಳಿಸಿದರು. ನಾಲ್ಕು ವರ್ಷದ ಹಿಂದೆ ಜಿಲ್ಲಾ ಸಂಘ ಆರಂಭಗೊಂಡಿತ್ತು, ಇದೀಗ ಮೊದಲ ವಲಯವಾಗಿ ಬಂಟ್ವಾಳ ವಲಯ ಉದ್ಘಾಟನೆಗೊಂಡಿರುವುದು ಅಭಿನಂದನೀಯ, ವಲಯದ ಸ್ಥಾಪನೆಗೆ ಕ್ಯಾಟರಿಂಗ್ ಮಾಲಕರು ಹಲವು ತಿಂಗಳಿನಿಂದ ಪರಿಶ್ರಮ ಪಡುತ್ತಿದ್ದು ಇದೊಂದು ಬಲಿಷ್ಠ ಸಂಘಟನೆಯಾಗಿ ಮೂಡಿ ಬರಲಿ ಎಂದು ಆಶಿಸಿದರು. Advertisement Advertisement ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಅಡುಗೆ ಕೆಲಸ ಸುಲಭವಾಗಬೇಕು ಎನ್ನುವ ಉದ್ದೇದಿಂದ ಕ್ಯಾಟರಿಂಗ್ ಉದ್ಯಮ ಅಸ್ಥಿತ್ವಕ್ಕೆ ಬಂತು. ಈಗ ಪ್ರತಿಯೊಂದು ಕಾರ್ಯಕ್ರಮಕ್ಕೂ ಕ್ಯಾಟರಿಂಗ್…

Read More

ಸೇವಾಂಜಲಿಯಲ್ಲಿ ಕ್ಷಯ ರೋಗಿಗಳಿಗೆ ಆಹಾರದ ಕಿಟ್ ವಿತರಣೆ ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಧವಸ ಧಾನ್ಯ ವಿತರಣ ಕಾರ್ಯಕ್ರಮ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಬುಧವಾರ ನಡೆಯಿತು. Advertisement ಬೆಂಗಳೂರಿನ ಉದ್ಯಮಿ ಏರ್ಯಬೀಡು ಬಾಲಕೃಷ್ಣ ಹೆಗ್ಡೆ ಆಹಾರದ ಕಿಟ್ ವಿತರಿಸಿ ಮಾತನಾಡಿ ರೋಗ ಬಂದ ಕೂಡಲೇ ತಕ್ಷಣ ಅದಕ್ಕೆ ಬೇಕಾದ ಚಿಕಿತ್ಸೆಯನ್ನು ನೀಡಬೇಕು ಆಗ ರೋಗ ಗುಣಮುಖವಾಗಲು ಸಾಧ್ಯವಿದೆ. ಕ್ಷಯರೋಗಿಗಳು ರೋಗ ಗುಣಮುಖವಾಗಲು ಔಷಧಿಯೊಂದಿಗೆ ಸೂಕ್ತ ಪೌಷ್ಟಿಕ ಆಹಾರವನ್ನು ಸೇವಿಸಬೇಕು ಎಂದು ತಿಳಿಸಿದರು. ಸೇವಾಂಜಲಿ ಸಂಸ್ಥೆ ನಿರಂತರವಾಗಿ ಸೇವಾ ಕಾರ್ಯವನ್ನು ನಡೆಸಿಕೊಂಡು ಬರುತ್ತಿದ್ದು ಕೃಷ್ಣ ಕುಮಾರ್ ಪೂಂಜ ಅವರು ಅರ್ಹರಿಗೆ ಇದನ್ನು ತಲುಪಿಸುತ್ತಿದ್ದಾರೆ ಎಂದರು. ಸೇವಾಂಜಲಿಯಲ್ಲಿ ಕ್ಷಯ ರೋಗಿಗಳಿಗೆ ಆಹಾರದ ಕಿಟ್ ವಿತರಣೆ ಬಂಟ್ವಾಳ ರೋಟರಿ ಕ್ಲಬ್ ಸದಸ್ಯ ಬಸ್ತಿ ಮಾಧವ ಶೆಣೈ ಶುಭಹಾರೈಸಿದರು. ವೇದಿಕೆಯಲ್ಲಿ ಉದ್ಯಮಿ ಸಂತೋಷ್ ಹೆಗ್ಡೆ ಬೆಂಗಳೂರು, ಸುರೇಶ್ ರೈ ಪೆಲಪಾಡಿ, ಎಂ.ಕೆ. ಖಾದರ್, ಡಾ…

Read More

ಮಂಗಳೂರು: -ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. Advertisement Advertisement

Read More

ವರಮಹಾಲಕ್ಷ್ಮೀ ವೃತಾಚರಣೆ ಬೆಳ್ಳಿ ಹಬ್ಬ ಮಹೋತ್ಸವ, ಬಂಟ್ವಾಳ ವಲಯದ ಸಭೆ ಬಂಟ್ವಾಳ: ಮಾಣಿಲ ಶ್ರೀಧಾಮದ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ಬಂಟ್ವಾಳ ವಲಯದ ಪೂರ್ವಭಾವಿ ಸಭೆ ಭಾನುವಾರ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ನಡೆಯಿತು. Advertisement ವರಮಹಾಲಕ್ಷ್ಮೀ ವೃತಾಚರಣೆ ಬೆಳ್ಳಿ ಹಬ್ಬ ಮಹೋತ್ಸವ, ಬಂಟ್ವಾಳ ವಲಯದ ಸಭೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾರ್ಗದರ್ಶನ ಮಾಡಿ ಕಾರ್ಯಕ್ರಮದ ಯಶಸ್ಸಿ ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ವಿಶ್ವ ಹಿಂದು ಪರಿಷತ್ ಬಂಟ್ವಾಳ ಘಟಕದ ಅಧ್ಯಕ್ಷ ಪ್ರಸಾದ್ ಕುಮಾರ್ ರೈ, ಪ್ರಮುಖರಾದ ಜಗನ್ನಾಥಚಚೌಟ ಬದಿಗುಡ್ಡೆ, ಚಂದ್ರಹಾಸ ಶೆಟ್ಟಿನಾರಾಯಣ ಸಿ. ಪೆರ್ನೆ, ತಾರಾನಾಥ ಕೊಟ್ಟಾರಿ, ಸುರೇಶ್ ಕುಲಾಲ್, ದೇವಪ್ಪ ಕುಲಾಲ್, ಮಚ್ಚೇಂದ್ರ ಸಾಲ್ಯಾನ್ ಮೊದಲಾದವರು ಭಾಗವಹಿಸಿದ್ದರು. ಬೆಳ್ಳಿ ಹಬ್ಬ ಸಂಭ್ರಮದ ಸಾಮೂಹಿಕ ವರಮಹಾಲಕ್ಷ್ಮಿ ವೃತಾಚರಣೆ ಜು.16 ರಿಂದ ಆರಂಭಗೊಂಡು ಆ. 25 ರವರೆಗೆ…

Read More

ಲಯನ್ಸ್ ಕ್ಲಬ್ ವತಿಯಿಂದ ಸಾಲುಮರಗಳ ಪೋಷಣೆ ಬಂಟ್ವಾಳ: ಕಳೆದ ಎರಡು ವರ್ಷಗಳ ಹಿಂದೆ ಲಯನ್ಸ್ ಕ್ಲಬ್ ವತಿಯಿಂದ ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಸಾಲು ಗಿಡಗಳನ್ನು ನಾಟಿ ಮಾಡಲಾಗಿದ್ದು ಇದೀಗ ಗಿಡಗಳು ಬೆಳೆದು ನಿಂತಿದೆ. ಗಿಡಗಳನ್ನು ಲಯನ್ಸ್ ಕ್ಲಬ್ ವತಿಯಿಂದಲೇ ನಿರ್ವಹಣೆ ಮಾಡಲಾಗುತ್ತಿದ್ದು ಲಯನ್ಸ್ ಕ್ಲಬ್ ಬಂಟ್ವಾಳದ ಸದಸ್ಯರು ಉದ್ದವಾಗಿ ಬೆಳೆದ ಗಿಡಗಳ ಕೊಂಬೆಗಳನ್ನು ಕತ್ತರಿಸಿ ಗಿಡದ ಪೋಷಣೆ ಮಾಡಿದರು. ಈ ಸಂದರ್ಭ ಲಯನ್ಸ್ ಕ್ಲಬ್ ಸದಸ್ಯರಾಧ ಶ್ರೀನಿವಾಸ ಪೂಜಾರಿ, ಸುನೀಲ್ ಬಿ, ಪ್ರಶಾಂತ್ ಉಪಸ್ಥಿತರಿದ್ದರು. Advertisement Advertisement

Read More

ಬಿರುವೆರ್ ಸೇವಾ ಟ್ರಸ್ಟ್ ವತಿಯಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಂಟ್ವಾಳ: ಬಿರುವೆರ್ ಸೇವಾ ಟ್ರಸ್ಟ್ ನರಿಕೊಂಬು ಬಂಟ್ವಾಳ ಇದರ ವತಿಯಿಂದ ಗುರುಪೂರ್ಣಿಮೆಯ ಪ್ರಯುಕ್ತ ಗುರುಪೂಜೆ ಸೋಮವಾರ ಮೊಗರ್ನಾಡುವಿನಲ್ಲಿರುವ ಟ್ರಸ್ಟ್‌ನ ಕಚೇರಿಯಲ್ಲಿ ನಡೆಯಿತು. Advertisement Advertisement ಕೇಶವ ಶಾಂತಿ ಅವರ ಪೌರೋಹಿತ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಇದೇ ಸಂದರ್ಭ ಬಿರುವೆರ್ ಸೇವಾ ಟ್ರಸ್ಟ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವೂ ನಡೆಯಿತು.ಗೌರವಾಧ್ಯಕ್ಷರಾಗಿ ದಿನೇಶ್ ಭಾಗೀರಥಿಕೊಡಿ, ಶ್ರೀಧರ ಮೇಸ್ತ್ರಿ ಸಜನ್ಕಪಲ್ಕೆ, ಕೃಷ್ಣಪ್ಪ ಪೂಜಾರಿ ನಾಟಿ, ಗೌರವ ಸಲಹೆಗಾರರಾಗಿ ಜಗನ್ನಾಥ ಬಂಗೇರ ನಿರ್ಮಾಲ್, ಪುರುಷೋತ್ತಮ ಸಾಲ್ಯಾನ್ ದಿಂಡಿಕೆರೆ, ಮಾಧವ ಕರ್ಬೆಟ್ಟು, ಅಧ್ಯಕ್ಷರಾಗಿ ಸೀತಾರಾಮ್ ಪೂಜಾರಿ ಬೋಳಂತೂರು, ಉಪಾಧ್ಯಕ್ಷರಾಗಿ ಹರೀಶ್ ಮರ್ದೋಳಿ, ಪ್ರಧಾನ ಕಾರ್ಯದರ್ಶಿಯಾಗಿ ಮನೋಜ್ ಪೂಜಾರಿ ನಿರ್ಮಾಲ್, ಜೊತೆ ಕಾರ್ಯದರ್ಶಿಯಾಗಿ ಮೋಹಲತಾ ಮರ್ದೋಳಿ, ಕೋಶಾಧಿಕಾರಿಯಾಗಿ ಉಮೇಶ್ ನೆಲ್ಲಿಗುಡ್ಡೆ, ಟ್ರಸ್ಟಿಗಳಾಗಿ ನಾರಾಯಣ ಪೂಜಾರಿ ದರ್ಕಸ್, ಪುಷ್ಪಾವತಿ ದೇಜಪ್ಪ ದರ್ಕಸ್, ವೀಣಾ ಸಂಜೀವ ಎನ್, ಹರೀಶ್ ಕೆದ್ದೇಲು, ಭಾರತಿ ನಾಯಿಲ, ಮಮತಾ…

Read More